ಸಾಕ್ಷಿಗಳ ವಿಶ್ವಾಸಾರ್ಹತೆಯನ್ನು ಬಲಪಡಿಸಬೇಕು: ಮಾಧ್ಯಮಗಳು ನ್ಯಾಯಾಧೀಶರ ಮೇಲೆ ಪ್ರಭಾವ ಬೀರಬಾರದು- ಸಿಎಂ ಡಿ.ಕೆ. ಶಿವಕುಮಾರ್

ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ರಕರಣಗಳಲ್ಲಿ ಸಾಕ್ಷಿಯಾಗುವುದರಲ್ಲಿ ತಪ್ಪೇನೂ ಇಲ್ಲವಾದರೂ, ಅದೇ ವ್ಯಕ್ತಿ ಅಸಾಮಾನ್ಯ ಸಂಖ್ಯೆಯ ಪ್ರಕರಣಗಳಲ್ಲಿ ಪದೇ ಪದೇ ಕಾಣಿಸಿಕೊಳ್ಳುವುದು ತನಿಖಾ ಪ್ರಕ್ರಿಯೆಯ ಬಗ್ಗೆ ಸಮಂಜಸವಾದ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.
CM DK Shivakumar
ಸಿಎಂ ಡಿಕೆ ಶಿವಕುಮಾರ್
Updated on

ಬೆಂಗಳೂರು: ಅನೇಕ ಪ್ರಕರಣಗಳಲ್ಲಿ ಸಾಕ್ಷಿಗಳಾಗಿ ಕಾಣಿಸಿಕೊಳ್ಳುವ ವ್ಯಕ್ತಿಗಳನ್ನು ಅನ್ಯಾಯವಾಗಿ ಗುರಿಪಡಿಸದಂತೆ ಎಚ್ಚರವಹಿಸುವ ಜೊತೆಗೆ, ಸಾಕ್ಷಿಗಳ ವಿಶ್ವಾಸಾರ್ಹತೆಯನ್ನು ಬಲಪಡಿಸುವ ಅಗತ್ಯವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ಪ್ರತಿಪಾದಿಸಿದರು.

ಬೆಂಗಳೂರಿನ ಕರ್ನಾಟಕ ನ್ಯಾಯಾಂಗ ಅಕಾಡೆಮಿಯಲ್ಲಿ ನಡೆದ 'ಸ್ಟಾಕ್ ವಿಟ್ನೆಸ್ ರಿಫಾರ್ಮ್ಸ್ ಕಮಿಟಿ 2026' (ನಿಯಮಿತ ಸಾಕ್ಷಿಗಳ ಸುಧಾರಣಾ ಸಮಿತಿ) ದಕ್ಷಿಣ ವಲಯ ಸಮಾಲೋಚನಾ ಸಭೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಶಿವಕುಮಾರ್, ವಿಶ್ವಾಸಾರ್ಹ ಸಾಕ್ಷಿ, ವಿಶ್ವಾಸಾರ್ಹ ನ್ಯಾಯ" ಎಂಬ ವಿಷಯಕ್ಕೆ ಸಮತೋಲಿತ ದೃಷ್ಟಿಕೋನದ ಅಗತ್ಯವಿದೆ ಎಂದು ಹೇಳಿದರು.

ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ರಕರಣಗಳಲ್ಲಿ ಸಾಕ್ಷಿಯಾಗುವುದರಲ್ಲಿ ತಪ್ಪೇನೂ ಇಲ್ಲವಾದರೂ, ಅದೇ ವ್ಯಕ್ತಿ ಅಸಾಮಾನ್ಯ ಸಂಖ್ಯೆಯ ಪ್ರಕರಣಗಳಲ್ಲಿ ಪದೇ ಪದೇ ಕಾಣಿಸಿಕೊಳ್ಳುವುದು ತನಿಖಾ ಪ್ರಕ್ರಿಯೆಯ ಬಗ್ಗೆ ಸಮಂಜಸವಾದ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಅವರು ಹೇಳಿದರು.

ಸಾಕ್ಷಿ ಎಂದರೆ ಕೇವಲ ಪ್ರಕರಣದ ಕಡತದಲ್ಲಿರುವ ಹೆಸರೋ, ಸಹಿಯೋ ಅಥವಾ ದಾಖಲೆಯೋ ಅಲ್ಲ ,ನ್ಯಾಯಾಂಗ ವ್ಯವಸ್ಥೆಯಲ್ಲಿ ಸಾಕ್ಷ್ಯದ ವಿಶ್ವಾಸಾರ್ಹತೆಯು ಅತ್ಯಂತ ಮಹತ್ವದ್ದಾಗಿದೆ ಎಂದು ಒತ್ತಿ ಹೇಳಿದರು.

ಸಾಕ್ಷಿ ವ್ಯವಸ್ಥೆಯನ್ನು ಸುಧಾರಿಸುವ ಪ್ರಯತ್ನಗಳಿಗೆ ರಾಜ್ಯವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಶಿವಕುಮಾರ್ ಸಮಿತಿಗೆ ಭರವಸೆ ನೀಡಿದರು. ಸಾಕ್ಷಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ದೃಢವಾದ ದತ್ತಾಂಶ ವ್ಯವಸ್ಥೆಗಳು ಮತ್ತು ತಂತ್ರಜ್ಞಾನದ ಪಾತ್ರವನ್ನು ಅವರು ಪ್ರಮುಖವಾಗಿ ಪ್ರಸ್ತಾಪಿಸಿದರು.

ಕಾರ್ಯಾಂಗ ಮತ್ತು ಶಾಸಕಾಂಗದ ಪ್ರಭಾವದಿಂದ ನ್ಯಾಯಾಂಗದ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಒತ್ತಿಹೇಳಿದ ಮುಖ್ಯಮಂತ್ರಿ, ಅಧಿಕಾರಗಳ ಪ್ರತ್ಯೇಕತೆಯು ಪ್ರಜಾಪ್ರಭುತ್ವದ ಮೂಲಭೂತ ರಕ್ಷಾಕವಚವಾಗಿದೆ ಎಂದು ಬಣ್ಣಿಸಿದರು.

CM DK Shivakumar
ಒಬ್ಬ ರಾಜಿನಾಮೆ ಕೊಟ್ಟರೇನು? ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ: ಸಿಎಂ ಡಿ.ಕೆ ಶಿವಕುಮಾರ್

ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗ ಮತ್ತು ಮಾಧ್ಯಮಗಳು ವಿಭಿನ್ನ ಪಾತ್ರಗಳನ್ನು ಹೊಂದಿದ್ದರೂ, ಅಂತಿಮವಾಗಿ ಸಂವಿಧಾನವನ್ನು ರಕ್ಷಿಸಲು, ಕಾನೂನಿನ ಆಳ್ವಿಕೆಯನ್ನು ಎತ್ತಿಹಿಡಿಯಲು ಮತ್ತು ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಕೆಲಸ ಮಾಡುತ್ತವೆ ಎಂದು ಅವರು ಹೇಳಿದರು.

"ಮಾಧ್ಯಮ ವಿಚಾರಣೆ" (media trials) ಬಗ್ಗೆ ಎಚ್ಚರಿಕೆ ನೀಡಿದ ಅವರು, ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಮಾಧ್ಯಮಗಳು ನ್ಯಾಯಾಧೀಶರ ಮೇಲೆ ಅಥವಾ ಅಧಿಕಾರಿಗಳ ಮೇಲೆ ಪ್ರಭಾವ ಬೀರಬಾರದು ಎಂದರು. ನ್ಯಾಯಾಲಯಗಳಲ್ಲಿ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ (AI) ಹೆಚ್ಚುತ್ತಿರುವ ಬಳಕೆಯ ಬಗ್ಗೆಯೂ ಅವರು ಪ್ರಸ್ತಾಪಿಸಿದರು, ಆದರೆ ತಾಂತ್ರಿಕ ಪ್ರಗತಿಯು ನ್ಯಾಯಕ್ಕೆ ಧಕ್ಕೆ ತರಬಾರದು ಎಂದು ಪುನರುಚ್ಚರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com