'ಮಾತು ಕೇಳದ ಅಧಿಕಾರಿಗಳನ್ನು ಫೈರ್ ಮಾಡ್ತೇನೆ, ತಹಶೀಲ್ದಾರ್ ನನ್ನ ಪಿಆರ್ ಒ ಆಗಿ ಕೆಲಸ ಮಾಡಲಿ': ಬಸವರಾಜ ರಾಯರೆಡ್ಡಿ; Video

ನಾನು ಸಚಿವ ಸ್ಥಾನದ ಕಾರ್ಯಭಾರದಲ್ಲಿ ಸಂಪೂರ್ಣ ಬ್ಯುಸಿಯಾಗಿರುತ್ತೇನೆ. ಹೀಗಾಗಿ ನೀವೇ ನನ್ನ ಪಿಆರ್‌ಒ ಆಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು. ತಮ್ಮ ಪಿಎಗೆ ಡಿಜಿಟಲ್ ಸಿಗ್ನೇಚರ್ ಬಳಸಿ ಪತ್ರಗಳನ್ನು ವಿಲೇವಾರಿ ಮಾಡುವಂತೆ ಹೇಳಿರುವುದಾಗಿ ತಿಳಿಸಿದರು.
Basavaraja Rayareddy
ಬಸವರಾಜ ರಾಯರೆಡ್ಡಿ
Updated on

ಕೊಪ್ಪಳ: ಇಸ್ಲಾಂ ಧರ್ಮ ಎಲ್ಲಕ್ಕಿಂತ ಶ್ರೇಷ್ಠ ಧರ್ಮ ಎಂದು ಹೇಳಿ ಇತ್ತೀಚೆಗೆ ತೀವ್ರ ವಿವಾದಕ್ಕೊಳಗಾಗಿದ್ದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಮತ್ತೊಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ನಡೆದ ಪದವಿಪೂರ್ವ ಕಾಲೇಜು ಉದ್ಘಾಟನಾ ಸಮಾರಂಭದಲ್ಲಿ ಅಧಿಕಾರಿಗಳ ಬಗ್ಗೆ ಮಾತನಾಡಿದ್ದು ಅತಿರೇಕವೆನಿಸಿದೆ.

ಡಿಜಿಟಲ್ ಸಿಗ್ನೇಚರ್ ಬಳಸಿ ಪತ್ರಗಳನ್ನು ವಿಲೇವಾರಿ ಮಾಡಿ

ಯಾವ ಅಧಿಕಾರಿ ಮಾತು ಕೇಳುವುದಿಲ್ಲವೋ ಹೇಳಿ, ಅಂತಹ ಮಾತು ಕೇಳದ ಅಧಿಕಾರಿಗಳನ್ನು ಫೈರ್ ಮಾಡುತ್ತೇನೆ ಎಂದ ಸಚಿವರು ಯಲಬುರ್ಗಾ ತಹಶೀಲ್ದಾರ್ ಪ್ರಕಾಶ್ ನಾಶಿ ಅವರನ್ನು ವೇದಿಕೆಯಲ್ಲೇ ಹೆಸರು ಹೇಳಿ, ನಾನು ಸಚಿವ ಸ್ಥಾನದ ಕಾರ್ಯಭಾರದಲ್ಲಿ ಸಂಪೂರ್ಣ ಬ್ಯುಸಿಯಾಗಿರುತ್ತೇನೆ. ಹೀಗಾಗಿ ನೀವೇ ನನ್ನ ಪಿಆರ್‌ಒ ಆಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು. ತಮ್ಮ ಪಿಎಗೆ ಡಿಜಿಟಲ್ ಸಿಗ್ನೇಚರ್ ಬಳಸಿ ಪತ್ರಗಳನ್ನು ವಿಲೇವಾರಿ ಮಾಡುವಂತೆ ಹೇಳಿರುವುದಾಗಿ ತಿಳಿಸಿದರು.

ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿ ದೊಡ್ಡದು. ಸುಮಾರು 1.52 ಕೋಟಿ ವಿದ್ಯಾರ್ಥಿಗಳು ಹಾಗೂ 96 ವಿಶ್ವವಿದ್ಯಾಲಯಗಳು ಬರುತ್ತವೆ. ಹೀಗಾಗಿ ನಮಗೆ ಹೆಚ್ಚಿನ ಜವಾಬ್ದಾರಿ ಕೆಲಸಗಳಿರುತ್ತವೆ. ಅಧಿಕಾರಿಗಳು ಕೈಜೋಡಿಸಬೇಕು, ಯಾರು ಸಹಕಾರ ನೀಡುವುದಿಲ್ಲ ಹೇಳಿ ಅವರನ್ನು ಲೆಫ್ಟ್ ರೈಟ್ ತಗೊಂಡು ಫೈರ್ ಮಾಡ್ತೇನೆ ಎಂದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ, ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದರು.

Basavaraja Rayareddy
ನಾನು ಉಪನಿಷತ್‌ ಮಾತಾಡ್ತೀನಿ, ಧರ್ಮದ ಬಗ್ಗೆ ಅವರಿಗಿಂತ ಚೆನ್ನಾಗಿ ನನಗೆ ಗೊತ್ತು: ಬಸವರಾಜ ರಾಯರೆಡ್ಡಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com