ಕಾವೇರಿ ಜಲ ಬಿಕ್ಕಟ್ಟಿನ ವಾಸ್ತವ ಪರಿಸ್ಥಿತಿಯನ್ನು CWMA ಮುಂದೆ ಮಂಡಿಸುತ್ತೇವೆ: ಸಚಿವ ಚೆಲುವರಾಯಸ್ವಾಮಿ; Video

ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಇಂದು ದೆಹಲಿಯಲ್ಲಿ ಮಹತ್ವದ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದು, ಮಳೆ, ಜಲಾಶಯಗಳ ನೀರಿನ ಮಟ್ಟ ಹಾಗೂ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಲಿವೆ.
Minister Chaluvarayaswamy
ಸಚಿವ ಚೆಲುವರಾಯಸ್ವಾಮಿ
Updated on

ಬೆಂಗಳೂರು: ತೀವ್ರ ನೀರಿನ ಕೊರತೆ ಹಾಗೂ ರೈತರ ಹಿತಾಸಕ್ತಿಗೆ ಸಂಬಂಧಿಸಿದ ಆತಂಕಗಳು ಸೇರಿದಂತೆ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮತ್ತು ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಮುಂದೆ ಕರ್ನಾಟಕ ಬಲವಾಗಿ ವಾದ ಮಂಡಿಸಲಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ.

ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಇಂದು ದೆಹಲಿಯಲ್ಲಿ ಮಹತ್ವದ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದು, ಮಳೆ, ಜಲಾಶಯಗಳ ನೀರಿನ ಮಟ್ಟ ಹಾಗೂ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಲಿವೆ.

ಕರ್ನಾಟಕದ ಪ್ರಸ್ತುತ ನೀರಿನ ಪರಿಸ್ಥಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ವಿವರಿಸಲು ಹಿರಿಯ ಅಧಿಕಾರಿಗಳ ತಂಡ ಈಗಾಗಲೇ ದೆಹಲಿಗೆ ತೆರಳಿದೆ ಎಂದು ಸಚಿವರು ತಿಳಿಸಿದರು. ಕಾವೇರಿ ನೀರಿನ ವಿಚಾರಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ಪರಿಶೀಲಿಸಲು ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೋಮವಾರ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿದ್ದರು ಎಂದರು.

Minister Chaluvarayaswamy
ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6,000 ಕ್ಯೂಸೆಕ್ ನೀರು ಹರಿಸಲು CWRA ಆದೇಶ

ರಾಜ್ಯದಲ್ಲಿನ ನೀರಿನ ಕೊರತೆಯ ವಾಸ್ತವಾಂಶಗಳನ್ನು CWRC ಮತ್ತು CWMA ಮುಂದೆ ಮಂಡಿಸಿ, ಕರ್ನಾಟಕಕ್ಕೆ ಹಂಚಿಕೆಯಾಗಿರುವ ಕಾವೇರಿ ನೀರಿನ ಪಾಲನ್ನು ರಕ್ಷಿಸುವಂತೆ ಬಲವಾಗಿ ವಾದಿಸಲಾಗುವುದು ಎಂದು ಚೆಲುವರಾಯಸ್ವಾಮಿ ಹೇಳಿದರು.

ಕಾವೇರಿ ನೀರಿನ ವಿಚಾರದಲ್ಲಿ ಪದೇಪದೆ ಸುಪ್ರೀಂ ಕೋರ್ಟ್‌ ಮೊರೆ ಹೋಗುತ್ತಿರುವ ತಮಿಳುನಾಡಿಗೆ, ಪ್ರತಿಯೊಂದು ವಿಚಾರಕ್ಕೂ ನ್ಯಾಯಾಲಯದ ಮೆಟ್ಟಿಲೇರದಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು ಎಂದು ಅವರು ತಿಳಿಸಿದರು. ತಮಿಳುನಾಡು ಕೃಷಿ ಚಟುವಟಿಕೆಗಳಿಗೆ ತನ್ನ ಪಾಲಿಗಿಂತ ಹೆಚ್ಚಿನ ಪ್ರಮಾಣದ ಕಾವೇರಿ ನೀರನ್ನು ಬಳಸುತ್ತಿದೆ ಎಂಬ ವಿಚಾರವನ್ನು ಕರ್ನಾಟಕ ಪ್ರಮುಖವಾಗಿ ಪ್ರಸ್ತಾಪಿಸಲಿದೆ ಎಂದು ಸಚಿವರು ಹೇಳಿದರು.

ರೈತರ ಹಿತಾಸಕ್ತಿಯನ್ನು ಕಾಪಾಡಲು ಕರ್ನಾಟಕ ಸರ್ಕಾರ ಬದ್ಧವಾಗಿದೆ ಎಂದು ಚೆಲುವರಾಯಸ್ವಾಮಿ ಪುನರುಚ್ಚರಿಸಿದರು.

ರೈತರ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಸದಾ ಬದ್ಧವಾಗಿದೆ. ಹೇಮಾವತಿ ಜಲಾನಯನ ಪ್ರದೇಶದ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಲಾಗಿದೆ. ಹಾರಂಗಿ ಮತ್ತು ಕೆಆರ್‌ಎಸ್ ಜಲಾಶಯಗಳ ಮೂಲಕವೂ ಅಗತ್ಯ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.

ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡುವುದರ ಜೊತೆಗೆ ರೈತರ ನೀರಿನ ಅಗತ್ಯಗಳನ್ನು ಪೂರೈಸಲು ಸರ್ಕಾರ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದರು.

ರಾಜ್ಯದ ನಿಯೋಗ ಹಾಗೂ ಅಧಿಕಾರಿಗಳು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸಮಿತಿಯ ಮುಂದೆ ಕರ್ನಾಟಕದ ವಾದವನ್ನು ಮಂಡಿಸಲಿದ್ದು, ರಾಜ್ಯದಲ್ಲಿನ ಪ್ರಸ್ತುತ ನೀರಿನ ಕೊರತೆ ಹಾಗೂ ಕುಡಿಯುವ ಮತ್ತು ಕೃಷಿ ಉದ್ದೇಶಗಳಿಗೆ ಸಾಕಷ್ಟು ನೀರು ಲಭ್ಯವಾಗುವಂತೆ ನೋಡಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಲಿದ್ದಾರೆ.

ಈಗಾಗಲೇ ಕಾವೇರಿ ನೀರು ಪ್ರಾಧಿಕಾರಗಳ ಆದೇಶಗಳಿಗೆ ಮಣಿದು, ಕರ್ನಾಟಕ ಸರ್ಕಾರ ಮೂರು ಸಂದರ್ಭಗಳಲ್ಲಿ ತಮಿಳುನಾಡಿಗೆ 40 ಟಿಎಂಸಿಗಿಂತ ಹೆಚ್ಚಿನ ನೀರನ್ನು ಬಿಡುಗಡೆ ಮಾಡಿದೆ ಎಂಬುದನ್ನು ಸ್ಮರಿಸಬಹುದು.

ಪ್ರತಿ ಬಾರಿಯೂ ನೀರು ಬಿಡುಗಡೆ ಮಾಡುವುದಿಲ್ಲ ಎಂದು ಸರ್ಕಾರ ಹೇಳಿದ್ದರೂ, ಅಂತಿಮವಾಗಿ ನೀರು ಬಿಡುಗಡೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಾರಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು ಎಂದು ಮಂಡ್ಯ ಜಿಲ್ಲೆಯ ರೈತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com