'ಕೈ' ಕಾರ್ಯಕರ್ತರಿಗೆ ಬಿಗ್‌ ಪವರ್‌: ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಗ್ಯಾರಂಟಿ ಸಮಿತಿ ರಚನೆಗೆ ಡಿಕೆಶಿ ಸೂಚನೆ..!

ಕಾಂಗ್ರೆಸ್‌ ತ್ಯಾಗ, ಜೀವನ ಮತ್ತು ಶಕ್ತಿಯ ಪ್ರತೀಕವಾಗಿದೆ. ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರು ಹಲವು ವರ್ಷಗಳ ಕಾಲ ಜೈಲಿನಲ್ಲಿದ್ದರು. ಇಂದಿರಾ ಗಾಂಧಿ ಮತ್ತು ರಾಜೀವ್‌ ಗಾಂಧಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು.
DCM D.K. Shivakumar
ಡಿಕೆ.ಶಿವಕುಮಾರ್
Updated on

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕರ್ತರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆರು ಸದಸ್ಯರ ಗ್ಯಾರಂಟಿ ಸಮಿತಿಗಳನ್ನು ರಚಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಮುಂದಿನ ವಾರದೊಳಗೆ ಸಮಿತಿಗಳನ್ನು ರಚಿಸುವಂತೆ ಶಾಸಕರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಭಾರತ್‌ ಜೋಡೋ ಯಾತ್ರೆಯ ನಾಲ್ಕನೇ ವಾರ್ಷಿಕೋತ್ಸವದ ಅಂಗವಾಗಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು,ಪಕ್ಷದ ಕಾರ್ಯಕರ್ತರು ನಮ್ಮೊಂದಿಗೆ ಇದ್ದರೆ ಅವರನ್ನು ಸಬಲೀಕರಣಗೊಳಿಸಲು ನಾವು ಸಿದ್ಧರಿದ್ದೇವೆ. ಪ್ರತಿ ತಾಲ್ಲೂಕಿನಲ್ಲಿ ಸುಮಾರು 250 ಮಂದಿಗೆ ಅಧಿಕಾರ ನೀಡಲಾಗುವುದು” ಎಂದು ಹೇಳಿದರು.

ಕಾಂಗ್ರೆಸ್‌ ಕಾರ್ಯಕರ್ತರಂತೆ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರಿಗೆ ತ್ರಿವರ್ಣ ಧ್ವಜ ಹಿಡಿದು ನಡೆಯಲು ಸಾಧ್ಯವಿಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್‌ ತ್ಯಾಗ, ಜೀವನ ಮತ್ತು ಶಕ್ತಿಯ ಪ್ರತೀಕವಾಗಿದೆ. ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರು ಹಲವು ವರ್ಷಗಳ ಕಾಲ ಜೈಲಿನಲ್ಲಿದ್ದರು. ಇಂದಿರಾ ಗಾಂಧಿ ಮತ್ತು ರಾಜೀವ್‌ ಗಾಂಧಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು. ಸೋನಿಯಾ ಗಾಂಧಿ ಅಧಿಕಾರವನ್ನು ತ್ಯಾಗ ಮಾಡಿದರು. ಬಿಜೆಪಿಯಲ್ಲಿ ತಮ್ಮ ಪ್ರಾಣ ಅಥವಾ ಅಧಿಕಾರವನ್ನು ತ್ಯಾಗ ಮಾಡಿದವರು ಯಾರಾದರೂ ಇದ್ದಾರೆಯೇ? ಎಂದು ಪ್ರಶ್ನಿಸಿದರು.

ಬಿಜೆಪಿ ಸದಸ್ಯರು ತಮ್ಮ ಪಾದಯಾತ್ರೆ ನಡೆಸಲಿ. ಅವರಿಗಿಂತ ನಾಲ್ಕು ಹೆಜ್ಜೆ ಮುಂದೆ ನಡೆಯುವ ಸಾಮರ್ಥ್ಯ ನಮಗಿದೆ ಎಂದು ಹೇಳಿದರು.

DCM D.K. Shivakumar
ಗಣಿ ಹರಾಜು ಪಡೆದೂ ಗಣಿಗಾರಿಕೆ ಆರಂಭಿಸದವರ ಪಟ್ಟಿ ನೀಡಿ; ಅಧಿಕಾರಿಗಳಿಗೆ ಸಿಎಂ ಡಿಕೆ.ಶಿವಕುಮಾರ್ ಸೂಚನೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com