ಚಾಮರಾಜನಗರ: ಹುಲಿ ದಾಳಿಗೆ ರೈತ ಬಲಿ; ದೇಹವನ್ನು ತಿಂದಿರುವ ವ್ಯಾಘ್ರ, ಕುಟುಂಬಸ್ಥರ ಪ್ರತಿಭಟನೆ

ಜಮೀನಿನಲ್ಲಿ ರೈತರೊಬ್ಬರು ಹುಲ್ಲು ಕೊಯ್ಯುವಾಗ ಹುಲಿಯೊಂದು ಏಕಾಏಕಿ ಹುಲಿ ಮಾಡಿ ಕೊಂದು ಹಾಕಿರುವ ಘಟನೆ ಚಾಮರಾಜನಗರ ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಜಮೀನಿನಲ್ಲಿ ರೈತರೊಬ್ಬರು ಹುಲ್ಲು ಕೊಯ್ಯುವಾಗ ಹುಲಿಯೊಂದು ಏಕಾಏಕಿ ಹುಲಿ ಮಾಡಿ ಕೊಂದು ಹಾಕಿರುವ ಘಟನೆ ಚಾಮರಾಜನಗರ ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರನ್ನು 60 ವರ್ಷದ ಬಸವಣ್ಣ ಎಂದು ಗುರುತಿಸಲಾಗಿದೆ. ಇನ್ನು ಹುಲಿ ಬಸವಣ್ಣನವರ ದೇಹದ ಕಾಲು ಭಾಗವನ್ನು ಹುಲಿ ತಿಂದು ಹಾಕಿದೆ. ಹುಲಿ ದಾಳಿಯಿಂದ ಬಡಗಲಪುರ ಸುತ್ತಲಿನ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

ಹುಲ್ಲು ಕೊಯ್ಯಲು ಜಮೀನಿಗೆ ತೆರಳಿದ್ದ ಬಸವಣ್ಣ ಕತ್ತಲಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕುತ್ತಾ ಜಮೀನಿಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಇನ್ನು ಕುಟುಂಬಸ್ಥರು ಜಮೀನಿನಲ್ಲೇ ಶವದ ಬಳಿ ಕುಳಿತು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬರುವಂತೆ ಆಗ್ರಹಿಸಿದ್ದಾರೆ. ಬಿಳಿಗಿರಿ ಹುಲಿ ಸಂರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಬಂದಿಲ್ಲ. ಆತಂಕದಲ್ಲಿಯೇ ಮೃತನ ಕುಟುಂಬದವರು ಮತ್ತು ಗ್ರಾಮಸ್ಥರು ಕಾಲ ಕಳೆಯುತ್ತಿದ್ದಾರೆ.

ಸಂಗ್ರಹ ಚಿತ್ರ
KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com