ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ

ಇಂದು ಸಂಜೆ 6 ಗಂಟೆಯ ಸುಮಾರಿಗೆ ಆರಂಭವಾದ ಮಳೆ 7 ಗಂಟೆಯವರೆಗೂ ಸುರಿದಿದ್ದು, ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
Heavy rain lashes parts of Bengaluru on Tuesday
ಬೆಂಗಳೂರಿನಲ್ಲಿ ಧಾರಾಕಾರ ಮಳೆ
Updated on

ಬೆಂಗಳೂರು: ಕಳೆದ ಎರಡ್ಮೂರು ದಿನಗಳಿಂದ ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನತೆಗೆ ಮಳೆರಾಯ ತಂಪೆರದಿದ್ದು, ಹಲವು ಕಡೆ ಮಂಗಳವಾರ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.

ಇಂದು ಸಂಜೆ 6 ಗಂಟೆಯ ಸುಮಾರಿಗೆ ಆರಂಭವಾದ ಮಳೆ 7 ಗಂಟೆಯವರೆಗೂ ಸುರಿದಿದ್ದು, ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೇಟ್, ಜಯನಗರ, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಕೋರಮಂಗಲ, ಎಚ್.ಎಸ್.ಆರ್ ಲೇಔಟ್, ಬೆಳ್ಳಂದೂರು, ವರ್ತೂರು, ಸರ್ಜಾಪುರ, ವೈಟ್ ಫೀಲ್ಡ್, ಕೆ.ಆರ್.ಪುರಂ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.

Heavy rain lashes parts of Bengaluru on Tuesday
ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ ಶಿವಕುಮಾರ್; Video

ಭಾರೀ ಮಳೆಯಿಂದ ಹಲವು ಕಡೆ ಅವಾಂತರಗಳು ಸೃಷ್ಟಿಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು.

ಕೆಆರ್ ಸರ್ಕಲ್ ಅಂಡರ್ ಪಾಸ್ ಕ್ಲೋಸ್

ಭಾರೀ ಮಳೆಯಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೆ ಆರ್ ಸರ್ಕಲ್ ಅಂಡರ್ ಪಾಸ್ ಕ್ಲೋಸ್ ಮಾಡಲಾಗಿದೆ. ಸಣ್ಣ ಮಳೆಗೂ ಕೆ ಆರ್ ಸರ್ಕಲ್ ಅಂಡರ್ ಪಾಸ್ ಜಲಾವೃತವಾಗುತ್ತೆ. ಹೀಗಾಗಿ ಪೊಲೀಸರು ಬ್ಯಾರಿಕೇಡ್ ಹಾಕಿ ಅಂಡರ್ ಪಾಸ್ ಬಂದ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com