ಹಂಪಿ: ಗಣೇಶ ಮೂರ್ತಿ ಮೆರವಣಿಗೆ ವೇಳೆ ವಿದ್ಯುತ್ ಅವಘಡ; ಇಬ್ಬರಿಗೆ ಗಂಭೀರ ಗಾಯ, ತಪ್ಪಿದ ದೊಡ್ಡ ಅನಾಹುತ!

ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಪೊಲೀಸರ ಪ್ರಕಾರ, ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದೆ ಮತ್ತು ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ.
Two injured after Ganesh idol comes in contact with power pole near Hampi
ಅವಘಡದಲ್ಲಿ ಹಾನಿಗೊಂಡ ಗಣೇಶ ಮೂರ್ತಿ
Updated on

ಹೊಸಪೇಟೆ: ವಿಜಯನಗರ ಜಿಲ್ಲೆಯ ಹಂಪಿ ಬಳಿಯ ಅನಂತಶಯನಗುಡಿ ಗ್ರಾಮದಲ್ಲಿ ಬೃಹತ್ ಗಣೇಶ ಮೂರ್ತಿ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿದ್ದು, ಘಟನೆಯಲ್ಲಿ ಇಬ್ಬರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ತಪ್ಪಿದ್ದು, ಭಕ್ತರು ಮತ್ತು ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ.

ಮೆರವಣಿಗೆ ಹೋಗುತ್ತಿದ್ದಾಗ ವಿದ್ಯುತ್ ಕಂಬದ ಮೇಲಿನ ತಂತಿಯು ಗಣೇಶ ಮೂರ್ತಿಗೆ ಕಟ್ಟಿದ ಬಿದಿರಿಗೆ ತಾಗಿ ಶಾರ್ಟ್ ಸರ್ಕ್ಯೂಟ್ ಆಗಿದೆ ಎಂದು ವರದಿಯಾಗಿದೆ. ವಿದ್ಯುತ್ ಸ್ಪರ್ಶದಿಂದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಪೊಲೀಸರ ಪ್ರಕಾರ, ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದೆ ಮತ್ತು ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ.

Two injured after Ganesh idol comes in contact with power pole near Hampi
ಗಣೇಶ ಮೂರ್ತಿ ವಿಸರ್ಜನೆ: ಬೆಂಗಳೂರಿನಾದ್ಯಂತ 659 ಸಂಚಾರಿ ಟ್ಯಾಂಕರ್‌, 42 ಶಾಶ್ವತ ಟ್ಯಾಂಕ್‌ಗಳ ವ್ಯವಸ್ಥೆ

ಗಾಯಗೊಂಡವರನ್ನು ಮಂಜು (30) ಮತ್ತು ಕತ್ರಜು ಕೆ(28) ಎಂದು ಗುರುತಿಸಲಾಗಿದೆ. ಇಬ್ಬರೂ ಅನಂತಶಯನಗುಡಿ ನಿವಾಸಿಗಳು.

ಮಾಹಿತಿ ಪಡೆದ ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಎಸ್ ಜಾಹ್ನವಿ ಮತ್ತು ಇತರ ಹಿರಿಯ ಪೊಲೀಸ್ ಮತ್ತು ಜಿಲ್ಲಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಅವರು ಪ್ರದೇಶವನ್ನು ಪರಿಶೀಲಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಪ್ರತ್ಯಕ್ಷದರ್ಶಿಗಳು ಮತ್ತು ಮೆರವಣಿಗೆಯಲ್ಲಿ ಭಾಗವಹಿಸಿದ್ದವರಿಂದ ಪೊಲೀಸ್ ಅಧಿಕಾರಿಗಳು ವಿವರಗಳನ್ನು ಸಂಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com