

ಬೆಂಗಳೂರು: ಕರ್ನಾಟಕದಲ್ಲಿ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿತ್ತು. ಆದರೆ, ನ್ಯಾಯಬೆಲೆ ಅಂಗಡಿಗಳಲ್ಲಿ ಅತಿಯಾದ ಜನದಟ್ಟಣೆ ಮತ್ತು ಸರ್ವರ್ ಡೌನ್ ಸಮಸ್ಯೆಯಿಂದಾಗಿ ಸಾರ್ವಜನಿಕರು ದಿನಂಪ್ರತಿ ತಮ್ಮ ಕೆಲಸ ಕಾರ್ಯ ಬಿಟ್ಟು ಸಾಕಷ್ಟು ತೊಂದರೆ ಎದುರಿಸುತ್ತಿದ್ದರು. ಜೊತೆಗೆ, ಈ ಸಮಸ್ಯೆಗೆ ಶೀಘ್ರದಲ್ಲೇ ಪಡಿತರ ಚೀಟಿದಾರರು ತಮ್ಮ ಮೊಬೈಲ್ ಮೂಲಕವೇ ಮನೆಯಲ್ಲಿ ಕುಳಿತು ಇ-ಕೆವೈಸಿ ಮಾಡಲು ಸರ್ಕಾರ ಹೊಸ ಯೋಜನೆ ಸಿದ್ದಪಡಿಸುತ್ತಿತ್ತು. ಆದರೆ, ಅದಕ್ಕೆ ಇನ್ನೂ ಒಂದು ವಾರದ ಸಮಯ ಬೇಕಿತ್ತು. ಅಷ್ಟರಲ್ಲಿ, ಈ ಇ-ಕೆವೈಸಿ ಮಾಡಿಸಲು, ಹೆಚ್ಚೆಂದರೆ ಒಂದು ವಾರ ಉಳಿತಿತ್ತೇನೋ! ಆದರೆ, ಸಮಸ್ಯೆ ಬೇಗ ಪರಿಹಾರವಾಗುತಿರಲಿಲ್ಲ.! ಈ ಕಾರಣದಿಂದ ಕರ್ನಾಟಕ ಸರ್ಕಾರ, ರಾಜ್ಯದಲ್ಲಿ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸುವ ಟೈಮ್ ವಿಸ್ತರಣೆ ಮಾಡಿದೆ. ಆ ಕುರಿತ ವರದಿ ಇಲ್ಲಿದೆ:
APL-BPL ಕಾರ್ಡ್ ಇ-ಕೆವೈಸಿಗೆ ಹೊಸ ಡೆಡ್ಲೈನ್!
ನ್ಯಾಯಬೆಲೆ ಅಂಗಡಿಗಳಲ್ಲಿ ಎದುರಾಗುತ್ತಿದ್ದ ತೀವ್ರ ಸರ್ವರ್ ಸಮಸ್ಯೆ ಹಾಗೂ ಸಾರ್ವಜನಿಕರ ದಟ್ಟಣೆಯ ಕಾರಣದಿಂದ ರಾಜ್ಯದಲ್ಲಿ . ಇನ್ನೂ ಕೋಟಿಗೂ ಅಧಿಕ ಪಡಿತರ ಚೀಟಿಗಳಿಗೆ ಇ-ಕೆವೈಸಿ ಬಾಕಿ ಇದೆ ಎನ್ನಲಾಗಿದೆ. ಹಾಗಾಗಿ, ರಾಜ್ಯ ಸರ್ಕಾರ, ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪೂರ್ಣಗೊಳಿಸಲು ಇದ್ದ ಕೊನೆಯ ದಿನಾಂಕವನ್ನು ಅಕ್ಟೋಬರ್ 20, 2026 ರವರೆಗೆ ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ.
ಇ-ಕೆವೈಸಿ ಕಡ್ಡಾಯ ಯಾಕೆ?
ಕೇಂದ್ರ ಸರ್ಕಾರದ ನಿಯಮದಂತೆ ಪ್ರತಿ 5 ವರ್ಷಕ್ಕೊಮ್ಮೆ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಹಾಗಾಗಿ, ರಾಜ್ಯದ ಸುಮಾರು 2.67 ಕೋಟಿ ಫಲಾನುಭವಿಗಳು ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 30, 2026 ಕೊನೆಯ ದಿನವಾಗಿದ್ದು, ಇ-ಕೆವೈಸಿ ಮಾಡಿಸದಿದ್ದರೆ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ.
ಇ-ಕೆವೈಸಿ ಮಾಡಿಸಲು ಯಾವೆಲ್ಲಾ ದಾಖಲೆಗಳು ಬೇಕು?
ಕುಟುಂಬದ ಸದಸ್ಯರ ಮೂಲ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸಂಖ್ಯೆ, ಆಧಾರ್ಗೆ ಲಿಂಕ್ ಆದ ಮೊಬೈಲ್ ಸಂಖ್ಯೆ ಹಾಗೂ ಎಲ್ಪಿಜಿ ಗ್ಯಾಸ್ ಸಂಪರ್ಕದ ವಿವರಗಳು (ಜಾತಿ ಪ್ರಮಾಣಪತ್ರ ಕೇವಲ SC/ST ಫಲಾನುಭವಿಗಳಿಗೆ ಮಾತ್ರ).