ಮಸೀದಿ ಬಳಿ ಪಟಾಕಿ ಸಿಡಿಸುವುದಕ್ಕೆ ಪೊಲೀಸರ ಆಕ್ಷೇಪ: ಮದ್ದೂರು ಸಾಮೂಹಿಕ ಗಣೇಶ ಮೆರವಣಿಗೆಯಲ್ಲಿ ಉದ್ವಿಗ್ನತೆ; Video

ಬಿಜೆಪಿ-ಜೆಡಿಎಸ್ ಬೆಂಬಲದೊಂದಿಗೆ ನಡೆದ ಮೆರವಣಿಗೆಯಲ್ಲಿ 108 ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಿತು. ನಿಗದಿತ ಮಾರ್ಗದಲ್ಲಿ ಮೆರವಣಿಗೆ ನಡೆಸಲು ಪೊಲೀಸರು ಅನುಮತಿ ನೀಡಿದ್ದರು. ಆದರೆ ಡಿಜೆ ಬಳಸುವುದನ್ನು ನಿಷೇಧಿಸಿದ್ದರು.
The procession, backed by the BJP-JD(S), involved the immersion of 108 Ganesha idols
ಬಿಜೆಪಿ-ಜೆಡಿಎಸ್ ಬೆಂಬಲದೊಂದಿಗೆ ನಡೆದ ಮೆರವಣಿಗೆಯಲ್ಲಿ 108 ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಿತು.
Updated on

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಿನ್ನೆ ಸಾಯಂಕಾಲ ನಡೆದ ಸಾಮೂಹಿಕ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಪೊಲೀಸರೊಂದಿಗೆ ಘರ್ಷಣೆಗೆ ಇಳಿದರು. ಮೆರವಣಿಗೆ ಸಾಗುವ ಮಾರ್ಗದಲ್ಲಿರುವ ಮಸೀದಿ ಬಳಿ ನೃತ್ಯ ಮಾಡುವುದು ಮತ್ತು ಪಟಾಕಿ ಸಿಡಿಸುವುದಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ.

ಬಿಜೆಪಿ-ಜೆಡಿಎಸ್ ಬೆಂಬಲದೊಂದಿಗೆ ನಡೆದ ಮೆರವಣಿಗೆಯಲ್ಲಿ 108 ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಿತು. ನಿಗದಿತ ಮಾರ್ಗದಲ್ಲಿ ಮೆರವಣಿಗೆ ನಡೆಸಲು ಪೊಲೀಸರು ಅನುಮತಿ ನೀಡಿದ್ದರು. ಆದರೆ ಡಿಜೆ ಬಳಸುವುದನ್ನು ನಿಷೇಧಿಸಿದ್ದರು.

ಮೆರವಣಿಗೆಯ ಭದ್ರತೆಗಾಗಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿ ಸೇರಿದಂತೆ 600ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಸುಮಾರು 30 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.

The procession, backed by the BJP-JD(S), involved the immersion of 108 Ganesha idols
ಗಣೇಶ ಚತುರ್ಥಿಗೆ ಮಾರುಕಟ್ಟೆಯಲ್ಲಿ ಕಂಡ ಕಲರ್‌ಫುಲ್ ಗಣಪತಿ ಮೂರ್ತಿಗಳು

ಇದಕ್ಕೂ ಮುನ್ನ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಎನ್‌.ಎಸ್‌. ಇಂದ್ರೇಶ್, ಕಳೆದ ವರ್ಷದ ಗಣೇಶ ಮೆರವಣಿಗೆ ವೇಳೆ ಕೋಮು ಉದ್ವಿಗ್ನತೆ ಉಂಟಾಗಿದ್ದ ಪೆಟ್ ಸ್ಟ್ರೀಟ್‌ನ ಮಸೀದಿ ಮುಂಭಾಗದಿಂದಲೇ ಮೆರವಣಿಗೆ ಸಾಗಲಿದೆ ಎಂದು ಹೇಳಿದ್ದರು. ಪೊಲೀಸರು ಅದಕ್ಕೆ ಸೂಚನೆ ನೀಡಿದ್ದರೂ ಮೆರವಣಿಗೆ ಅದೇ ಮಾರ್ಗದಲ್ಲಿ ಸಾಗಲಿದೆ ಎಂದು ಅವರು ಸವಾಲು ಹಾಕಿದ್ದರು.

ಮದ್ದೂರಿನಲ್ಲಿ ಬೃಹತ್ ಸಾಮೂಹಿಕ ವಿಸರ್ಜನಾ ಮೆರವಣಿಗೆ ನಡೆಸುತ್ತೇವೆ. 10,000-15,000 ಹಿಂದೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಮಸೀದಿ ಮುಂಭಾಗದಿಂದಲೇ ಮೆರವಣಿಗೆ ಕೊಂಡೊಯ್ಯುತ್ತೇವೆ. ಅಲ್ಲಿಗೆ ಹೋಗಬಾರದು ಎಂದು ಯಾರೂ ನಮಗೆ ಹೇಳಬಾರದು. ಡಿಜೆ ಹಾಗೂ ಸಾಂಸ್ಕೃತಿಕ ತಂಡಗಳೊಂದಿಗೆ ಮೆರವಣಿಗೆ ನಡೆಸುತ್ತೇವೆ. ತಾಕತ್ತಿದ್ದರೆ ಬಂದು ತಡೆಯಿರಿ ಎಂದು ಹೇಳಿದ್ದರು.

ಮೆರವಣಿಗೆ ವೇಳೆ ಮಸೀದಿ ಮುಂಭಾಗದಲ್ಲಿ ಪಟಾಕಿ ಸಿಡಿಸುವ ಪ್ರಯತ್ನವನ್ನು ಪೊಲೀಸರು ತಡೆದ ಬಳಿಕ ಕೆಲ ಮೆರವಣಿಗೆ ಭಾಗವಹಿಸಿದ್ದವರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸಿದ್ದು, ಮಸೀದಿ ಬಳಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಯಿತು.

ಟಿ. ನರಸೀಪುರ ವಿವಾದ

ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಗಣೇಶ ಚತುರ್ಥಿ ಮೆರವಣಿಗೆಗೆ ಅನುಮತಿ ಕೋರಿ ಬಂದಿದ್ದ ಯುವಕರಿಗೆ ಟೌನ್ ಇನ್‌ಸ್ಪೆಕ್ಟರ್ ಧನಂಜಯ ಅವರು ಮಸೀದಿ ಮುಂಭಾಗದಿಂದ ಮೆರವಣಿಗೆ ಕೊಂಡೊಯ್ಯುವುದು ಮತ್ತು ಪಟಾಕಿ ಸಿಡಿಸುವುದರ ವಿರುದ್ಧ ಎಚ್ಚರಿಕೆ ನೀಡಿದ ಕೆಲವೇ ದಿನಗಳ ಬಳಿಕ ಮದ್ದೂರಿನಲ್ಲಿ ಈ ಬೆಳವಣಿಗೆ ನಡೆದಿದೆ.

ಮೆರವಣಿಗೆಗೆ ಅನುಮತಿ ಕೋರಿ ಬಂದಿದ್ದ ಯುವಕರ ಮೇಲೆ ಇನ್‌ಸ್ಪೆಕ್ಟರ್ ಕಠಿಣ ಷರತ್ತುಗಳನ್ನು ವಿಧಿಸಿದ್ದಾರೆ ಮತ್ತು ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಬಲಪಂಥೀಯ ಸಾಮಾಜಿಕ ಮಾಧ್ಯಮ ಖಾತೆಗಳು ಇನ್‌ಸ್ಪೆಕ್ಟರ್ ಅವರ ಹೇಳಿಕೆಗೆ ಕೋಮು ಆಯಾಮ ನೀಡಿದ್ದವು.

ಆದರೆ, ಧನಂಜಯ ಅವರು ನೀಡಿದ್ದ ಒಂಬತ್ತು ನಿಮಿಷಗಳ ಮಾಹಿತಿ ನೀಡುವ ಕಾರ್ಯಕ್ರಮದ ಕೊನೆಯಲ್ಲಿ ಈ ಎಚ್ಚರಿಕೆ ನೀಡಿದ್ದರು . ಮೆರವಣಿಗೆಯಲ್ಲಿ ಭಾಗವಹಿಸುವವರು ತಮ್ಮ ಹಾಗೂ ಭಕ್ತರ ಸುರಕ್ಷತೆಗೆ ಆದ್ಯತೆ ನೀಡಬೇಕು ಮತ್ತು ಆಚರಣೆಗಳಿಂದ ಇತರರಿಗೆ ತೊಂದರೆ ಅಥವಾ ನೋವು ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಸಂಘಟಕರಿಗೆ ತಿಳಿಸಿದ್ದರು.

ಬಳಿಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ರಾಜ್ಯಾದ್ಯಂತ ಗಣೇಶ ಮೆರವಣಿಗೆಗಳ ನಿರ್ವಹಣೆಯಲ್ಲಿ ತೊಡಗಿರುವ ಪೊಲೀಸರೊಂದಿಗೆ ಸಹಕರಿಸುವಂತೆ ಗಣೇಶ ಚತುರ್ಥಿ ಆಚರಿಸುತ್ತಿರುವ ಜನರಿಗೆ ಮನವಿ ಮಾಡಿದ್ದರು.

ಗಣೇಶೋತ್ಸವ ಆಚರಣೆಗಳ ಪ್ರಮಾಣ ದೊಡ್ಡದಾಗಿದ್ದು, ಮೆರವಣಿಗೆಗಳ ನಿರ್ವಹಣೆಗೆ ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com