ಧ್ಯಾನ ಮಾಡುವುದರಿಂದ, ಒಂದೇ ಉದ್ದೇಶಕ್ಕಾಗಿ ಗಮನ ಹರಿಸುವುದು ಸುಲಭವಾಗಲಿದ್ದು, ಗುರಿಯನ್ನು ತಲುಪಿ ಅಂದುಕೊಂಡಿದ್ದನ್ನು ಸಾಧಿಸಲು ಸಾಧ್ಯವಾಗಲಿದೆ ಎಂಬ ಅಂಶವನ್ನು ಸಂಶೋಧಕರು ಕಂಡುಕೊಂಡಿದ್ದಾರೆ. ಧ್ಯಾನ ತರಬೇತಿಯಿಂದ ಚಂಚಲ ಮನಸ್ಸಿನ ಮೇಲೆ ಪರಿಣಾಮ ಬೀರಿ ಚಂಚಲತೆಯನ್ನು ನಿಯಂತ್ರಣ ಮಾಡಲು ಸಾಧ್ಯವಿದೆ ಎಂಬುದನ್ನು ನಮ್ಮ ಸಂಶೋಧನೆಯ ಫಲಿತಾಂಶಗಳು ತೋರಿಸುತ್ತಿವೆ ಎಂದು ಕೆನಡಾದ ವಾಟರ್ಲೂ ವಿಶ್ವವಿದ್ಯಾನಿಲಯದ ಸಂಶೋಧಕ, ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.