ನವದೆಹಲಿ: ವಿವಿಧ ಕಾರ್ಮಿಕ ಒಕ್ಕೂಟಗಳು ಕರೆ ನೀಡಿರುವ ಭಾರತ್ ಬಂದ್ ಗೆ ಹಲವು ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆಯಾದರೂ ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಬಂದ್ ತೀವ್ರತೆ ಪಡೆದುಕೊಂಡಿದೆ.
ಕೇಂದ್ರ ಸರ್ಕಾರ ಕಾರ್ಮಿಕ ನೀತಿ ವಿರೋಧಿಸಿ ಮತ್ತು ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿ ದೇಶಾದ್ಯಂತ ಇಂದು ಭಾರತ್ ಬಂದ್ ನಡೆಸಲಾಗುತ್ತಿದೆ. 2014 ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾರ್ಮಿಕ ಸಂಘಟನೆಗಳು ನಡೆಸುತ್ತಿರುವ 10 ಭಾರತ್ ಬಂದ್ ಇದಾಗಿದ್ದು, ಬಂದ್ ನಿಂದಾಗಿ ನೇರವಾಗಿ ಮತ್ತು ಪರೋಕ್ಷವಾಗಿ ಸುಮಾರು 25 ಕೋಟಿ ಕಾರ್ಮಿಕರ ಮೇಲೆ ಪರಿಣಾಮ ಬೀರುತ್ತಿದೆ.
ಒಡಿಶಾ ಮತ್ತು ಬಂಗಾಳದಲ್ಲಿ ರೈಲು ಮತ್ತು ಬಸ್ ಸಂಚಾರದ ಮೇಲೆ ಬಂದ್ ಪರಿಣಾಮ ಬೀರಿದೆ.
Advertisement