
ಜೂನ್ 3 ರಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಲೋಕ ಭವನದಲ್ಲಿ ವ್ಯಾಪಕ ವ್ಯವಸ್ಥೆ ಮಾಡಲಾಗಿದೆ.
ವಿಧಾನಸೌಧ ಮತ್ತು ಲೋಕಭವನ ಪ್ರದೇಶದ ಸುತ್ತಲೂ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರನ್ನು ಒಳಗೊಂಡ ಕಾಂಗ್ರೆಸ್ ಧ್ವಜಗಳು ಮತ್ತು ದೊಡ್ಡ ಬ್ಯಾನರ್ಗಳನ್ನು ಹಾಕಲಾಗಿದೆ.
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಿವಕುಮಾರ್, ಬುಧವಾರ ಸಂಜೆ 4.05 ಗಂಟೆಗೆ ಲೋಕ ಭವನದಲ್ಲಿ ಸಚಿವ ಸಂಪುಟದ ಕೆಲವು ಸದಸ್ಯರೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ 4.05ಕ್ಕೆ ಲೋಕಭವನದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಸಮಾರಂಭ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗುತ್ತಿದೆ.
ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಡಿಕೆ ಶಿವಕುಮಾರ್ ಅವರು, ಸ್ವಾಮೀಜಿ, ಫಾದರ್ ಹಾಗೂ ಮೌಲ್ವಿ ಸೇರಿದಂತೆ ಸರ್ವಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ಈ ಸಂಬಂಧ ಈಗಾಗಲೇ ಎಲ್ಲಾ ಧರ್ಮ, ಜಾತಿಗಳ ಸುಮಾರು 55 ಸ್ವಾಮೀಜಿಗಳಿಗೆ ಆಹ್ವಾನ ನೀಡಲು ಸೂಚನೆ ನೀಡಲಾಗಿದೆ. ಈ ಮೂಲಕ ಸರ್ವ ಧರ್ಮ ಸಹಿಷ್ಣುತೆ, ಪರಸ್ಪರ ಸಹಬಾಳ್ವೆ, ಶಾಂತಿ ಸೌಹಾರ್ದತೆಯ ಸಂದೇಶ ಸಾರಲು ಡಿಕೆಶಿ ಮುಂದಾಗಿದ್ದಾರೆ ಎನ್ನಲಾಗಿದೆ.
ಕರ್ನಾಟಕ ವಿಧಾನಸಭಾ ಸಚಿವಾಲಯದ ಅಧಿಕಾರಿಗಳು ಮತ್ತು ನೌಕರರಿಗೆ ಮಂಗಳವಾರ ಸ್ಪೀಕರ್ ಯು.ಟಿ. ಖಾದರ್ ಅವರು ಔತಣಕೂಟ ಆಯೋಜಿಸಿದ್ದು, ಅವರು ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ.
ಅವರೊಂದಿಗೆ ಯುಟಿ ಖಾದರ್ ಅವರು ಸಹ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
"ಕರ್ನಾಟಕ ವಿಧಾನಸಭೆ ಸಚಿವಾಲಯದ ಎಲ್ಲಾ ಅಧಿಕಾರಿಗಳು ಮತ್ತು ನೌಕರರಿಗೆ ಸ್ಪೀಕರ್ ಖಾದರ್ ಅವರು ಇಂದು, ಸಂಜೆ 6 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಭೋಜನಕೂಟವನ್ನು ಆಯೋಜಿಸಿದ್ದರು" ಎಂದು ವಿಧಾನಸಭೆ ಸಚಿವಾಲಯ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಮುಖ್ಯಮಂತ್ರಿ ಹುದ್ದೆ ತಡವಾಗಿ ಬಂದಿರಬಹುದು, ಆದರೆ ನಿರಾಕರಿಸಿಲ್ಲ ಎಂದು ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ. ಇಷ್ಟು ವರ್ಷ ಪಟ್ಟ ಪರಿಶ್ರಮ, ಬದ್ಧತೆಗೆ ದೊರೆತ ಪ್ರತಿಫಲದ ಕ್ಷಣ ಎಂದು ಬಣ್ಣಿಸಿದ್ದಾರೆ.
ನಾಳೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲು ಸಜ್ಜಾಗಿರುವಂತೆಯೇ ANI ವಿಶೇಷ ಸಂದರ್ಶದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ತನ್ನ ರಾಜಕೀಯ ಜೀವನ ವೈಯಕ್ತಿಕ ಮಹತ್ವಕಾಂಕ್ಷೆಗಿಂತಲೂ ಕಠಿಣ ಪರಿಶ್ರಮದ ಮೇಲೆ ರೂಪುಗೊಂಡಿದೆ. ಈ ಹಂತ ತಲುಪುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ಮಹತ್ವದ್ದಾಗಿದೆ ಎಂದಿದ್ದಾರೆ.
#WATCH | Delhi: Karnataka CM-designate DK Shivakumar says, "The faith and the confidence the people of this country have shown me, I am very much obliged, and I have to do a lot of hard work and deliver. I know roads will not be so easy. It will be difficult times, but still I… pic.twitter.com/VUBJTcNgR4
— ANI (@ANI) June 2, 2026
ಕಳೆದ ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ತಮ್ಮ ಉಪಮುಖ್ಯಮಂತ್ರಿಯಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಅತ್ಯಂತ ಗೌರವಯುತವಾಗಿ ಅಧಿಕಾರ ಹಸ್ತಾಂತರ ಮಾಡಿದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಂಗಳವಾರ ಮಹತ್ವದ ಹುದ್ದೆ ನೀಡಿದೆ.
ಕಳೆದ ತಿಂಗಳು, ಕಾಂಗ್ರೆಸ್ ಹೈಕಮಾಂಡ್, ಸಿದ್ದರಾಮಯ್ಯ ಅವರಿಗೆ ಪಕ್ಷದಲ್ಲಿ ಪ್ರಮುಖ ಹುದ್ದೆ ನೀಡುತ್ತದೆ ಎಂದು ವರದಿಯಾಗಿತ್ತು. ಅದರಂತೆ ಈಗ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಸದಸ್ಯ ಸ್ಥಾನ ನೀಡಿ ಆದೇಶ ಹೊರಡಿಸಿದೆ.
ಡಿಕೆಶಿ ಪದಗ್ರಹಣಕ್ಕೂ ಮುನ್ನವೇ ಸಿದ್ದರಾಮಯ್ಯ ಅವರನ್ನು ಸಿಡಬ್ಲ್ಯೂಸಿ ಸದಸ್ಯರಾಗಿ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಅವರು ಮತ್ತೆ ಪರಮೋಚ್ಚ ಸಮಿತಿಗೆ ಮರಳಿದ್ದಾರೆ.
ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆಗೆ 12-15 ಶಾಸಕರು ಇಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಸಂಜೆ 4.05 ಕ್ಕೆ ಲೋಕಭವನದ ಗ್ಲಾಸ್ ಹೌಸ್ನಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಲೋಕಸಭೆಯ ವಿರೋಧ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಿಯೋಜಿತ ಸಿಎಂ ಶಿವಕುಮಾರ್ ಅವರೊಂದಿಗೆ ಒಟ್ಟಾಗಿ ಕುಳಿತು ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ.
ಈ ಉನ್ನತ ಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ ಸಲ್ಲಿಸಿದ ಪಟ್ಟಿಯಲ್ಲಿರುವ 12 ಮಂದಿಯಲ್ಲಿ 10 ಮಂದಿಯನ್ನು ಹಾಗೂ ಶಿವಕುಮಾರ್ ಸಲ್ಲಿಸಿದ 15 ಮಂದಿಯ ಪಟ್ಟಿಯಿಂದ 13 ಮಂದಿಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.
ಡಿಕೆ ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸೋನಿಯಾ, ರಾಹುಲ್ ಸೇರಿದಂತೆ ದೇಶದ ಪ್ರಮುಖ ಗಣ್ಯರು ಹಾಗೂ ಸರ್ವಧರ್ಮದ 55 ಧರ್ಮಗುರುಗಳು ಉಪಸ್ಥಿತರಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಸಿಎಂ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗಣ್ಯರ ಆಗಮನ ಮುಂದುವರಿದಿದೆ. ಕೇರಳದ ಕಾಂಗ್ರೆಸ್ ಸಂಸದ ಆಂಟೋ ಆಂಟೊನಿ ಅವರು ಇಂದು ಬೆಳಗ್ಗೆ 10 ಗಂಟೆಯ ವಿಮಾನದಲ್ಲಿ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಏರ್ಪೋರ್ಟ್ನಿಂದ ಅವರು ನೇರವಾಗಿ ಬೆಂಗಳೂರಿನ ಕಾರ್ಯಕ್ರಮದತ್ತ ಪ್ರಯಾಣ ಬೆಳೆಸಿದ್ದಾರೆ.
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಸಚಿವ ಸ್ಥಾನ ಸಿಗುವ ಬಗ್ಗೆ ಅಧಿಕೃತ ಮಾಹಿತಿ ಬಂದ ತಕ್ಷಣ, ಅವರು ಮಧ್ಯಾಹ್ನದ ವೇಳೆಗೆ ಡೆಪ್ಯುಟಿ ಸ್ಪೀಕರ್ಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ಸೇರಲಿರುವ ಹಿನ್ನೆಲೆಯಲ್ಲಿ ಖಾದರ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ರಾಷ್ಟ್ರ ರಾಜಧಾನಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಿದರು.
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಕೂಡ ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆಯಿದೆ.
ಹಿರಿಯ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಅವರು ಬುಧವಾರ ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಶಿವಕುಮಾರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮುನ್ನ ಈ ಸಭೆ ನಡೆದಿದ್ದು, ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂಬ ಊಹಾಪೋಹಗಳಿವೆ.
ಪರಮೇಶ್ವರ್ ಅವರಲ್ಲದೆ, ಸತೀಶ್ ಜಾರಕಿಹೊಳಿ, ರಾಮಲಿಂಗಾ ರೆಡ್ಡಿ, ಎಂಬಿ ಪಾಟೀಲ್, ಯತೀಂದ್ರ ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವಾರು ಹಿರಿಯ ಕಾಂಗ್ರೆಸ್ ನಾಯಕರು ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಡಿಕೆ ಶಿವಕುಮಾರ್ ಪ್ರಮಾಣವಚನ: 13 ಶಾಸಕರಿಗೆ ಮಂತ್ರಿ ಸ್ಥಾನ, ಯಾರಿಗೆಲ್ಲಾ ಸಚಿವಗಿರಿ? ಇಲ್ಲಿದೆ ಪಟ್ಟಿ https://t.co/MwOEL5iWZl #Bengaluru #DKShivakumarswearingin #CongressGovt #ThaawarchandGehlot #LokBhavan #ಬೆಂಗಳೂರು #ಡಿಕೆಶಿವಕುಮಾರ್_ಪ್ರಮಾಣವಚನ #ಕಾಂಗ್ರೆಸ್_ಸರ್ಕಾರ #ತಾವರಚಂದ್_ಗೆಹ್ಲೋಟ್ #ಲೋಕಭವನ…
— kannadaprabha (@KannadaPrabha) June 3, 2026
ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ನಗರಕ್ಕೆ ಕೇರಳ ಗೃಹ ಸಚಿವ ರಮೇಶ್ ಚೆನ್ನಿತ್ತಲ ಆಗಮಿಸಿದ್ದು ಈವೇಳೆ ಮಾತನಾಡಿದ ಅವರು "ಡಿಕೆ ಶಿವಕುಮಾರ್ ಒಬ್ಬ ಸಮರ್ಥ ನಾಯಕ. ಕಳೆದ 40 ವರ್ಷಗಳಿಂದ ನನಗೆ ಅವರ ಪರಿಚಯವಿದೆ. ಅವರು ಕರ್ನಾಟಕದ ಜನರಿಗೆ ಉತ್ತಮ ಆಡಳಿತ ನೀಡಬಲ್ಲರು ಎಂದು ನಾನು ಭಾವಿಸುತ್ತೇನೆ. ಅವರ ನಾಯಕತ್ವದಲ್ಲಿ ಕರ್ನಾಟಕ ರಾಜ್ಯವು ಸಮೃದ್ಧವಾಗುತ್ತದೆ. ಎರಡು ವರ್ಷಗಳು ಒಳ್ಳೆಯ ಅವಧಿ. ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಬಲ್ಲರು. ಎರಡು ವರ್ಷಗಳ ನಂತರ ಅವರು ಮತ್ತೆ ಬರುತ್ತಾರೆ ಎಂದು ನಾನು ಭಾವಿಸುತ್ತೇನೆ" ಎಂದು ಹೇಳಿದ್ದಾರೆ.
#WATCH | Bengaluru | Arriving in the city to attend the swearing-in ceremony of Karnataka CM designate DK Shivakumar, Keralam Home Minister Ramesh Chennithala says, "DK Shivakumar is a capable leader. I have known him for the last 40 years. I feel he can give good governance to… pic.twitter.com/bHQORo5bxg
— ANI (@ANI) June 3, 2026
ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರು ಮಾಜಿ ಸಿಎಂ ಮತ್ತು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದರು.
ಕರ್ನಾಟಕ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರು ಮಾಜಿ ಸಿಎಂ ಮತ್ತು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದರು.#Bengaluru #DKShivakumarswearingin #CongressGovt pic.twitter.com/W7XE1RFrdL
— kannadaprabha (@KannadaPrabha) June 3, 2026
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿಕೆಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್ಡಿದೇವೇಗೌಡ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗುತ್ತಿರುವ ಡಿಕೆ ಶಿ ವಕುಮಾರ್ ಅವರನ್ನು ಜೆಡಿಎಸ್ ವರಿಷ್ಠರು ಅಭಿನಂದಿಸಿದರು ಮತ್ತು ಶುಭಾಶಯಗಳನ್ನು ಕೋರಿದರು.
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿಕೆಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್ಡಿದೇವೇಗೌಡ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗುತ್ತಿರುವ ಡಿಕೆ ಶಿ ವಕುಮಾರ್ ಅವರನ್ನು ಜೆಡಿಎಸ್ ವರಿಷ್ಠರು ಅಭಿನಂದಿಸಿದರು ಮತ್ತು ಶುಭಾಶಯಗಳನ್ನು… pic.twitter.com/YmMaHTqd2n
— kannadaprabha (@KannadaPrabha) June 3, 2026
ಹಿರಿಯ ಕಾಂಗ್ರೆಸ್ ನಾಯಕ ಜಿ ಪರಮೇಶ್ವರ ಕರ್ನಾಟಕದ ನೂತನ ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.
ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ನಂತರ ಪರಮೇಶ್ವರ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
ಡಿಕೆ ಶಿವಕುಮಾರ್ ಪ್ರಮಾಣವಚನ: 13 ಶಾಸಕರಿಗೆ ಮಂತ್ರಿ ಸ್ಥಾನ, ಯಾರಿಗೆಲ್ಲಾ ಸಚಿವಗಿರಿ? ಇಲ್ಲಿದೆ ಪಟ್ಟಿ https://t.co/MwOEL5iWZl #Bengaluru #DKShivakumarswearingin #CongressGovt #ThaawarchandGehlot #LokBhavan #ಬೆಂಗಳೂರು #ಡಿಕೆಶಿವಕುಮಾರ್_ಪ್ರಮಾಣವಚನ #ಕಾಂಗ್ರೆಸ್_ಸರ್ಕಾರ #ತಾವರಚಂದ್_ಗೆಹ್ಲೋಟ್ #ಲೋಕಭವನ…
— kannadaprabha (@KannadaPrabha) June 3, 2026
ನೂತನ ಡಿ.ಕೆ. ಶಿವಕುಮಾರ್ ಸರ್ಕಾರದ ಭಾಗವಾಗುತ್ತಿರುವ ಹಿನ್ನೆಲೆ, ವಿಧಾನಸಭೆ ಸ್ಪೀಕರ್ ಹುದ್ದೆಗೆ ಯು.ಟಿ. ಖಾದರ್ ರಾಜೀನಾಮೆ ನೀಡಿದ್ದು, ಡೆಪ್ಯುಟಿ ಸ್ಪೀಕರ್ಗೆ ರಾಜೀನಾಮೆ ಪತ್ರ ಸಲ್ಲಿಸಿದ ಅವರು ನಾನು ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ. ಆದರೆ ಆರೋಗ್ಯ ಖಾತೆ ಅಥವಾ ವಸತಿ ಖಾತೆ ಸಿಕ್ಕರೆ ಒಳಿತೆಂಬ ಬಯಕೆ ಇದೆ ಎಂದು ಹೇಳಿದ್ದಾರೆ.
ಕರ್ನಾಟಕದಾದ್ಯಂತ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನಿಯೋಜಿತ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಶಿವಕುಮಾರ್ ಮತ್ತು ಅವರ ಸಂಪುಟ ಸಚಿವರು ಇಂದು ಸಂಜೆ 4.05 ಕ್ಕೆ ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು, 230 ಆಯ್ದ ಬಸ್ ನಿಲ್ದಾಣಗಳಲ್ಲಿ ಡಿಜಿಟಲ್ ಡಿಸ್ಪ್ಲೇ ಪರದೆಗಳ ಮೂಲಕ ನೇರ ಪ್ರಸಾರ ಮಾಡಲಾಗುವುದು.
ಐತಿಹಾಸಿಕ ಕಾರ್ಯಕ್ರಮವನ್ನು ವೀಕ್ಷಿಸಲು ಪ್ರಯಾಣಿಸುವ ಸಾರ್ವಜನಿಕರಿಗಾಗಿ ನೇರ ಪ್ರಸಾರ ಮಾಡಲಾಗುತ್ತಿದೆ ಎಂದು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇತರ 13 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರಿಂದಾಗಿ ಬೆಂಗಳೂರು ಪೊಲೀಸರು ಕಬ್ಬನ್ ರಸ್ತೆ ಜಂಕ್ಷನ್, ಬಾಳೇಕುಂದ್ರಿ ವೃತ್ತದ ಬಳಿಯ ಕ್ವೀನ್ಸ್ ರಸ್ತೆ, ಬಿಆರ್ವಿ ರಸ್ತೆ ಜಂಕ್ಷನ್ ಮತ್ತು ಚಾಲುಕ್ಯ ವೃತ್ತವನ್ನು ಸಂಚಾರಕ್ಕೆ ಮುಚ್ಚಿದ್ದಾರೆ. ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಭಾರತಿ ನಗರದ ನಿವಾಸಿ ಯಾಸಿನ್ ಬೇಗ್ ಅವರು ಶ್ರೀ ಜಗದ್ಗುರು ರೇಣುಕಾಚಾರ್ಯ ಕಾನೂನು ಕಾಲೇಜಿಗೆ ಪ್ರಮಾಣಪತ್ರ ಪಡೆಯಲು ಮನೆಯಿಂದ ಹೊರಟಿದ್ದರು, ಆದರೆ ಮಧ್ಯಾಹ್ನ 1.15 ರಿಂದ ಸುಮಾರು ಒಂದು ಗಂಟೆ ಸಂಚಾರದಲ್ಲಿ ಸಿಲುಕಿಕೊಂಡರು. "ಸುಮಾರು ಎರಡು ಗಂಟೆಗಳ ಕಾಲ ಸಂಚಾರದ ನಂತರ, ನಾನು ಮನೆಗೆ ಮರಳಲು ನಿರ್ಧರಿಸಿದೆ" ಎಂದು ಬೇಗ್ ಹೇಳಿದರು.
ಅದೇ ರೀತಿ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಅಗ್ನಿಶಾಮಕ ಮತ್ತು ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಎರಡು ಖಾಸಗಿ ಸಂಸ್ಥೆಗಳು ಕಬ್ಬನ್ ಪಾರ್ಕ್ ನಿಂದ ಶಿವಾಜಿನಗರ ಸುತ್ತಲೂ ಸುತ್ತುತ್ತಿದ್ದವು, ಏಕೆಂದರೆ ಸಂಚಾರ ಸ್ಥಗಿತಗೊಂಡಿತ್ತು. "ನಮ್ಮಿಂದ ಪಾಸ್ ಮತ್ತು ಅನುಮತಿ ಕೇಳುತ್ತಿರುವುದರಿಂದ ನಮಗೆ ಅವಕಾಶ ನೀಡಲಾಗುತ್ತಿಲ್ಲ" ಎಂದು ಉದ್ಯೋಗಿಯೊಬ್ಬರು ಹೇಳಿದರು.
ಪ್ರಮಾಣವಚನ ಸಮಾರಂಭಕ್ಕೂ ಮುನ್ನ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಳ್ಳಲು ಕರ್ನಾಟಕ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿದರು.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿಕೆ ಶಿವಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, "ಅವರು ಕರ್ನಾಟಕವನ್ನು ಯಶಸ್ವಿಯಾಗಿ ಮುನ್ನಡೆಸುತ್ತಾರೆ ಎಂಬ ಅಚಲ ವಿಶ್ವಾಸ ನನಗಿದೆ" ಎಂದು ಹೇಳಿದರು.
"ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಸಾಗಿ. ನೀವು ಕರ್ನಾಟಕವನ್ನು ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅಚಲ ವಿಶ್ವಾಸ ನನಗಿದೆ. ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ. ಭವಿಷ್ಯದಲ್ಲಿ ನೀವು ಯಶಸ್ವಿಯಾಗಲಿ" ಎಂದು ಅವರು ಡಿಕೆಎಶಿಗೆ ಹಾರೈಸಿದರು.
ಕರ್ನಾಟಕ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಅವರ ಪತ್ನಿ ಉಷಾ ಮತ್ತು ಪುತ್ರಿ ಐಶ್ವರ್ಯ ಅವರು ಸದಾಶಿವನಗರದ ತಮ್ಮ ನಿವಾಸದಿಂದ ಲೋಕ ಭವನಕ್ಕೆ ಆಗಮಿಸಿದರು.
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭದ ಮುನ್ನ, ಕರ್ನಾಟಕ ಹೈಕೋರ್ಟ್ ಎದುರು ಅಳವಡಿಸುತ್ತಿದ್ದ ಬೃಹತ್ ಕಟೌಟ್ಗಳನ್ನು ತೆರವುಗೊಳಿಸಿದ ಘಟನೆ ನಡೆದಿದೆ.
ಪ್ರಮಾಣವಚನಕ್ಕೂ ಮುನ್ನವೇ ಹಿನ್ನಡೆ: ಹೈಕೋರ್ಟ್ ಎದುರು ಅಳವಡಿಸಿದ್ದ ಬೃಹತ್ ಕಟೌಟ್ಗಳ ತೆರವು, ಕಾರಣವೇನು? video https://t.co/hPbCIUI1mg #Bengaluru #DKShivakumarswearingin #CongressGovt #cutouts #KarnatakaHighCourt #ಬೆಂಗಳೂರು #ಡಿಕೆಶಿವಕುಮಾರ್_ಪ್ರಮಾಣವಚನ #ಕಾಂಗ್ರೆಸ್_ಸರ್ಕಾರ #ಕಟೌಟ್ #ಕರ್ನಾಟಕಹೈಕೋರ್ಟ್…
— kannadaprabha (@KannadaPrabha) June 3, 2026
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಡಿಕೆ ಶಿವಕುಮಾರ್ (D.K. Shivakumar) ಅವರ ಪ್ರಮಾಣವಚನ ಸಮಾರಂಭದ ಮುನ್ನ, ಅವರ ಅಭಿಮಾನಿಗಳು ಕರ್ನಾಟಕ ಹೈಕೋರ್ಟ್ (Karnataka High Court) ಎದುರು ಅಳವಡಿಸುತ್ತಿದ್ದ ಬೃಹತ್ ಕಟೌಟ್ಗಳನ್ನು ತೆರವುಗೊಳಿಸಿದ ಘಟನೆ ನಡೆದಿದೆ.#Bengaluru #DKShivakumarswearingin… pic.twitter.com/qffOSpjANP
— kannadaprabha (@KannadaPrabha) June 3, 2026
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಡಿಕೆ ಶಿವಕುಮಾರ್ ಲೋಕಭವನಕ್ಕೆ ಆಗಮಿಸಿದ್ದಾರೆ. ಕಾರ್ಯಕ್ರಮದಲ್ಲಿ ಚಲನ ಚಿತ್ರ ನಟರು, ಸ್ವಾಮೀಜಿಗಳು, ತೆಲಂಗಾಣ ಸಿಎಂ, ಕೇರಳ ಸಿಎಂ ಭಾಗಿಯಾಗಿದ್ದಾರೆ. ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಗಣ್ಯರನ್ನು ಭೇಟಿ ಮಾಡಿದ್ದಾರೆ.
ಪ್ರಮಾಣವಚನ ಸಮಾರಂಭಕ್ಕೆ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಲೋಕ ಭವನಕ್ಕೆ ಆಗಮಿಸಿದರು.
ಇದಕ್ಕೂ ಮೊದಲು, ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖರ್ಗೆ ಮತ್ತು ಗಾಂಧಿ ಅವರನ್ನು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.
ಲೋಕ ಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಹಾಗೂ ರಾಜ್ಯಸಭಾ ಸಂಸದೆ ಸುಧಾ ಮೂರ್ತಿ, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ನಟರಾದ ಜಯಮಾಲಾ ಮತ್ತು ಶಿವರಾಜ್ಕುಮಾರ್ ಸೇರಿದಂತೆ ವಿವಿಧ ವಿದೇಶಿ ದೂತಾವಾಸಗಳ ಮುಖ್ಯಸ್ಥರು ಭಾಗವಹಿಸಿದ್ದಾರೆ.
ಹೊಸ ಕಾಂಗ್ರೆಸ್ ಸರ್ಕಾರದ ಪ್ರಮಾಣವಚನ ಸಮಾರಂಭ ಆರಂಭವಾಗಿದ್ದು, ಸಂಜೆ 4.05 ಕ್ಕೆ ನಿಗದಿಯಾಗಿರುವ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಮಧ್ಯಾಹ್ನ 3.59 ಕ್ಕೆ ವೇದಿಕೆಗೆ ಆಗಮಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ರಣದೀಪ್ ಸುರ್ಜೇವಾಲ ಮತ್ತು ಕೆಸಿ ವೇಣುಗೋಪಾಲ್ ಸೇರಿದಂತೆ ವೇದಿಕೆಯ ಮೇಲಿದ್ದ ನಾಯಕರು ಮತ್ತು ಗಣ್ಯರನ್ನು ರಾಜ್ಯಪಾಲರು ಸ್ವಾಗತಿಸಿದರು.
ವಂದೇ ಮಾತರಂನ ಪೂರ್ಣ ಪಠಣದೊಂದಿಗೆ ಸಮಾರಂಭವು ಪ್ರಾರಂಭವಾಯಿತು, ನಂತರ ನಿಗದಿತ ಕಾರ್ಯಕ್ರಮದ ಪ್ರಕಾರ ರಾಷ್ಟ್ರಗೀತೆ ಮತ್ತು ರಾಜ್ಯ ಗೀತೆ ಜಯ ಭಾರತ ಜನನಿಯ ತನುಜಾತೆಯೊಂದಿಗೆ ಪ್ರಾರಂಭವಾಯಿತು.
ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಂದ ಪಟಾಕಿ ಸಿಡಿಸುವಿಕೆ ಮತ್ತು ಹರ್ಷೋದ್ಗಾರಗಳ ನಡುವೆ, ಡಿ.ಕೆ. ಶಿವಕುಮಾರ್ ಅವರು ಸಂಜೆ 4.15 ಕ್ಕೆ ಕರ್ನಾಟಕದ 18 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಭಾರತದ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಪ್ರಮಾಣ ವಚನ ಸ್ವೀಕರಿಸಿದರು ಮತ್ತು ಅಜ್ಜಯ್ಯ ಸ್ವಾಮೀಜಿಯವರ ಛಾಯಾಚಿತ್ರಕ್ಕೆ ಗೌರವ ಸಲ್ಲಿಸಿದರು. ಅವರು ತಮ್ಮ ಆಧ್ಯಾತ್ಮಿಕ ಗುರು ವೀರಗಂಗಾಧರ ಅಜ್ಜಯ್ಯ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಅವರು ಸಂಜೆ 4.15 ಕ್ಕೆ ಕರ್ನಾಟಕದ 18 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರತಿಜ್ಞಾವಿಧಿ ಸ್ವೀಕಾರಕ್ಕೂ ಮುನ್ನ ಅಜ್ಜಯ್ಯ ಸ್ವಾಮೀಜಿಯವರ ಛಾಯಾಚಿತ್ರಕ್ಕೆ ಗೌರವ ಸಲ್ಲಿಸಿದ ಡಿಕೆಶಿ ಬಳಿಕ ಭಾರತದ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ತಮ್ಮ ಆಧ್ಯಾತ್ಮಿಕ ಗುರು ವೀರಗಂಗಾಧರ… pic.twitter.com/ZB2tIn7osd
— kannadaprabha (@KannadaPrabha) June 3, 2026
ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸ್ವಲ್ಪ ಸಮಯದ ನಂತರ, ಲೋಕ ಭವನದಲ್ಲಿ ಸಂಜೆ 4.18 ಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ ಪ್ರಮಾಣ ವಚನ ಸ್ವೀಕರಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ವಿಸರ್ಜನೆಯಾದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಕಚೇರಿ (CMO) ಅಧಿಕಾರಿಗಳನ್ನು ತಮ್ಮ ತಮ್ಮ ಕರ್ತವ್ಯಗಳಿಂದ ಬಿಡುಗಡೆ ಮಾಡಲಾಗಿದೆ.
ಮೂಲಗಳ ಪ್ರಕಾರ ಮುಖ್ಯಮಂತ್ರಿ ಕಚೇರಿ (CMO), ಸಲಹೆಗಾರರ ಕಚೇರಿಗಳು ಹಾಗೂ ದೆಹಲಿಯ ಕರ್ನಾಟಕ ವಿಶೇಷ ಪ್ರತಿನಿಧಿ ಕಚೇರಿಯಲ್ಲಿ ನಿಯೋಜನೆ, ಗುತ್ತಿಗೆ ಮತ್ತು ಔಟ್ಸೋರ್ಸಿಂಗ್ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕರ್ನಾಟಕ ಸರ್ಕಾರ ಬಿಡುಗಡೆಗೊಳಿಸಿದೆ.
ಉಪಮುಖ್ಯಮಂತ್ರಿ ಜಿ ಪರಮೇಶ್ವರ ಅವರ ಪ್ರಮಾಣ ವಚನ ಸ್ವೀಕಾರದ ನಂತರ, 12 ಕ್ಯಾಬಿನೆಟ್ ಸಚಿವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು, ಸಂವಿಧಾನವನ್ನು ಎತ್ತಿಹಿಡಿಯಲು ಮತ್ತು ಸಚಿವರಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ಪ್ರತಿಜ್ಞೆ ಮಾಡಿದರು.
ಏತನ್ಮಧ್ಯೆ, ಕರ್ನಾಟಕದ ಮುಖ್ಯಮಂತ್ರಿಯಾಗಿ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರವನ್ನು ಬೆಂಬಲಿಗರು ಆಚರಿಸಿ ಲೋಕ ಭವನದ ಬಳಿ ಲಡ್ಡುಗಳನ್ನು ವಿತರಿಸಲಾಯಿತು.
ಡಿಕೆ ಶಿವಕುಮಾರ್ ಬೆನ್ನಲ್ಲೇ ಡಾ. ಜಿ ಪರಮೇಶ್ವರ್, ಕೆಎಚ್ ಮುನಿಯಪ್ಪ, ಕೆಜೆ ಜಾರ್ಜ್, ಎಂಬಿ ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೋಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯುಟಿ ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್ ಮತ್ತು ಶರಣ ಪ್ರಕಾಶ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣವಚನ ಸಮಾರಂಭದ ನಂತರ, ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಮೊದಲ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಲು ವಿಧಾನಸೌಧಕ್ಕೆ ತೆರಳಲಿದ್ದಾರೆ. ಕಾಂಗ್ರೆಸ್ ಭವನದ ಉದ್ಘಾಟನೆಯನ್ನು ಬುಧವಾರದಿಂದ ಗುರುವಾರಕ್ಕೆ ಮುಂದೂಡಲಾಗಿದೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ಮೋದಿ x ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ.@DKShivakumar
— Narendra Modi (@narendramodi) June 3, 2026
ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಕಾರ್ಯಾಕ್ರಮದಲ್ಲಿ ಭಾಗಿಯಾಗಿದ್ದ ಅವರ ಪತ್ನಿ ಉಷಾ ಮತ್ತು ಪುತ್ರಿ ಐಶ್ವರ್ಯ ಅವರು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಕರ್ನಾಟಕದ ಜನರಿಗೆ ನಾವು ಕೃತಜ್ಞರಾಗಿರುತ್ತೇವೆ, ಅವರ ಜವಾಬ್ದಾರಿಗಳು ಇಂದು 100 ಪಟ್ಟು ಹೆಚ್ಚಾಗಿದೆ, 2028 ರಲ್ಲಿ ಜನರು ಅವರನ್ನು ಮತ್ತೆ ಆಯ್ಕೆ ಮಾಡುತ್ತಾರೆ ಎಂದು ಸಿಎಂ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹೇಳಿದರು.
ರಾಜ್ಯದ ಜನತೆಗೆ ಅವರು ಒಳ್ಳೆಯದನ್ನೇ ಮಾಡುತ್ತಾರೆ ಎಂದು ಸಿಎಂ ಡಿಕೆ ಶಿವಕುಮಾರ್ ಅವರ ಪತ್ನಿ ಉಷಾ ಹೇಳಿದರು.
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆರ್ಥಿಕ ಸಲಹೆಗಾರರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ, ಪ್ರಸ್ತುತ 'ಬೆಂಗಳೂರು ಬಿಸಿನೆಸ್ ಕಾರಿಡಾರ್' ಅಧ್ಯಕ್ಷರಾಗಿರುವ ಎಲ್.ಕೆ ಅತೀಕ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮನಾದ ವೇತನ ಹಾಗು ಇತರ ಭತ್ತೆಗಳು ಈ ಹುದ್ದೆಗೆ ಸಿಗಲಿವೆ ಎಂದು ಆದೇಶದಲ್ಲಿ ಹೇಳಲಾಗಿದೆ.
ಇಂದು ಸಂಜೆ ಲೋಕಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.#Cabinet #Karnataka @DKShivakumar https://t.co/O5GE6BEHoB
— kannadaprabha (@KannadaPrabha) June 3, 2026
ಕರ್ನಾಟಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರನ್ನು ನೇಮಿಸಲಾಗಿದೆ. ಅವರು ನಗರಾಭಿವೃದ್ಧಿ ಇಲಾಖೆಯಲ್ಲಿ ಸಹಾಯಕ ಮುಖ್ಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಲಿದ್ದಾರೆ.
ಇದೇ ವೇಳೆ, ರಾಜ್ಯ ಸರ್ಕಾರ ರಾಜೇಂದ್ರ ಚೋಳನ್ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿಯೂ ನೇಮಿಸಿದೆ. ಇದರ ಜೊತೆಗೆ, KPCL ವ್ಯವಸ್ಥಾಪಕ ನಿರ್ದೇಶಕರ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ.
ಈ ಹುದ್ದೆಯ ಹೆಚ್ಚುವರಿ ಉಸ್ತುವಾರಿಯಲ್ಲಿದ್ದ ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತಾ ಅವರನ್ನು ಈ ಜವಾಬ್ದಾರಿಯಿಂದ ವಿಮುಕ್ತಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇದರ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಅವರು ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಅಭಿವೃದ್ಧಿಗೆ ಹೊಸ ರೂಪ - ಹೊಸ ವೇಗ ನೀಡುವ ನನ್ನ ಸಂಕಲ್ಪಕ್ಕೆ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಮುನ್ನುಡಿ ಬರೆದಿದ್ದೇನೆ.
— CM of Karnataka (@CMofKarnataka) June 3, 2026
ರಾಜ್ಯದ ಜನರ ಸರ್ವತೋಮುಖ ಪ್ರಗತಿಯ ಭರವಸೆಯನ್ನಿತ್ತು ಅಧಿಕಾರಕ್ಕೆ ಬಂದಿರುವ ನಾವು ಜನತೆ ಕೊಟ್ಟ ಈ ಅವಕಾಶವನ್ನು ಅಧಿಕಾರವೆಂದು ಭಾವಿಸದೆ, ಸೇವೆಯ… pic.twitter.com/aZ92WQJHmB
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಸಚಿವ ಸ್ಥಾನ ವಂಚಿತರಿಗೆ ಹಾಗೂ ಅಧಿಕಾರ ಆಸೆ ಉಳ್ಳವರಿಗೆ ಅತ್ಯಂತ ಖಡಕ್ ಸಂದೇಶ ರವಾನಿಸಿದ್ದಾರೆ. ಸರ್ಕಾರದಲ್ಲಿ ಈಗಾಗಲೇ ಬೇರೆ ಬೇರೆ ಕೆಲಸ ಮಾಡಿದವರು ಈಗ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು. ನಾವೆಲ್ಲರೂ ಸೇರಿ ರಾಹುಲ್ ಗಾಂಧಿ ಅವರ ಹೋರಾಟಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ. ಸಂಘಟನೆ ಮತ್ತು ಸರ್ಕಾರ ಎರಡನ್ನೂ ಸಮತೋಲನವಾಗಿ ಹಂಚಿಕೊಂಡು ಮುಂದೆ ಹೋಗೋಣ. ನನ್ನ ಪೂರ್ವಜರು ಮಾಡಿದ ಪುಣ್ಯದಿಂದಾಗಿ ಈ ಪವಿತ್ರ ಪಕ್ಷದ ಅಧ್ಯಕ್ಷ ಹುದ್ದೆ ನನಗೆ ಸಿಕ್ಕಿದೆ. ಸಾಮಾನ್ಯ ಕಾರ್ಯಕರ್ತರಿಗೆ ಏನೇ ತೊಂದರೆಯಾದರೂ ನಾನು ಸದಾ ಅವರ ಜೊತೆ ಇರುತ್ತೇನೆ ಎಂದು ಭರವಸೆ ನೀಡಿದರು.
#WATCH | Bengaluru | A day after becoming Karnataka CM, DK Shivakumar arrives at the Vidhana Soudha pic.twitter.com/0SSrt2xfpi
— ANI (@ANI) June 4, 2026
ಲೋಕಭವನದಲ್ಲಿ ಅಧಿಕಾರ ಹಸ್ತಾಂತರ ಪರ್ವ: ಯಾವುದೇ ಅಹಿತಕರ ಘಟನೆಯಿಲ್ಲದೆ ಸುಸೂತ್ರವಾಗಿ ಮುಕ್ತಾಯಗೊಂಡ ನೂತನ ಸಿಎಂ ಪ್ರಮಾಣವಚನ ಸಮಾರಂಭ https://t.co/f2W4I7ZIg1 #Karnataka #ಕರ್ನಾಟಕ #ಡಿಕೆಶಿವಕುಮಾರ್ #ಪ್ರಮಾಣವಚನಸಮಾರಂಭ #DKShivkumar #Swearinginceremony @XpressBengaluru @BJP4Karnataka @INCKarnataka
— kannadaprabha (@KannadaPrabha) June 4, 2026
ಡಿಕೆಶಿ ಸಚಿವ ಸಂಪುಟದಲ್ಲಿ ಯತೀಂದ್ರಗೆ ಸಚಿವ ಸ್ಥಾನ: ಹಳೇ ಮೈಸೂರು ಭಾಗದಲ್ಲಿ ಹಿಡಿತ ಸಾಧಿಸಲು ಕಾಂಗ್ರೆಸ್ ಹೈಕಮಾಂಡ್ ಮಾಸ್ಟರ್ ಪ್ಲ್ಯಾನ್..! https://t.co/DO8j0gTbQ4 #ಸಚಿವಸಂಪುಟ #DKShivakumar #Siddaramaiah #ಸಿದ್ದರಾಮಯ್ಯ #Cabinet #ಡಿಕೆಶಿವಕುಮಾರ್ #OldMysuru #ಹಳೇಮೈಸೂರು #ಯತೀಂದ್ರಸಿದ್ದರಾಮಯ್ಯ…
— kannadaprabha (@KannadaPrabha) June 4, 2026
ದಕ್ಷಿಣ ಕನ್ನಡದ ಮೇಲೆ ಕಾಂಗ್ರೆಸ್ ಕಣ್ಣು: ಯು.ಟಿ. ಖಾದರ್ಗೆ ಮಂತ್ರಿಗಿರಿ ಪಟ್ಟ, BJP ಭದ್ರಕೋಟೆ ಭೇದಿಸಲು ರಣತಂತ್ರ..! https://t.co/RWBGE4jLWu #Congress #ಕಾಂಗ್ರೆಸ್ #dakshinakannada #ದಕ್ಷಿಣಕನ್ನಡ #UTkhader #ಯುಟಿಖಾದರ್ @XpressBengaluru @BJP4Karnataka @INCKarnataka
— kannadaprabha (@KannadaPrabha) June 4, 2026
'ಅಧಿಕಾರ ಬೇಕಾದವರು ಡಿ ಕೆ ಶಿವಕುಮಾರ್ ಜತೆ ಹೋಗಿ, ಪಕ್ಷ ಕಟ್ಟುವವರು ನನ್ನ ಜೊತೆ ಬನ್ನಿ-Video
— kannadaprabha (@KannadaPrabha) June 4, 2026
https://t.co/jbUmSxUBrG @XpressBengaluru @NewIndianXpress @HariprasadBK2 @DKShivakumar @INCIndia @INCKarnataka #BKHariprasad #KarnatakaCongress #DKShivakumar #ಡಿಕೆಶಿವಕುಮಾರ್ #ಕರ್ನಾಟಕಕಾಂಗ್ರೆಸ್…
Advertisement