'ದಿ.ಶ್ರೀಕಂಠದತ್ತ ಒಡೆಯರು ನಿಧನರಾದ 14 ತಿಂಗಳ ಬಳಿಕ, ಐತಿಹಾಸಿಕ ಯದುವಂಶಕ್ಕೆ ಒಬ್ಬ ಸಮರ್ಥ ಉತ್ತರಾಧಿಕಾರಿಯನ್ನು ಹುಡುಕಲಾಯಿತು. ಯದುವೀರ ಒಡೆಯರ್ ತಂದೆ ಬೆಟ್ಟದ ಕೋಟೆ ಅರಸು ಪರಂಪರೆಯವರು. ಜಯಚಾಮರಾಜ ಒಡೆಯರ ಮರಿಮಗ. ದಿ.ಶ್ರೀಕಂಠದತ್ತ ಒಡೆಯ'ರ ಹಿರಿಯ ಸೋದರಿ 'ದಿ.ಗಾಯತ್ರಿ ದೇವಿ', ಮತ್ತು 'ದಿ.ರಾಮಚಂದ್ರ ಅರಸ್ ರ ಪುತ್ರಿ 'ತ್ರಿಪುರ ಸುಂದರೀ ದೇವಿ' ಮತ್ತು 'ಸ್ವರೂಪ್ ಗೋಪಾಲ ರಾಜೇ ಅರಸ್', ರವರ ಏಕೈಕ ಪುತ್ರ. ಯದುವೀರ್ ಗೆ ಒಬ್ಬ ಸೋದರಿ 'ಜಯಾತ್ಮಿಕಾ' ಇದ್ದಾರೆ.
ಬೆಂಗಳೂರಿನ, 'ವಿದ್ಯಾನಿಕೇತನ್ ಶಿಕ್ಷಣ ಸಂಸ್ಥೆ'ಯಲ್ಲಿ 'ಎಸ್. ಎಸ್.ಎಲ್.ಸಿ'. ತರಗತಿ ಮುಗಿಸಿ, 'ಕೆನೆಡಿಯನ್ ಅಂತಾರಾಷ್ಟ್ರೀಯ ಶಾಲೆ'ಯಲ್ಲಿ 12 ನೆಯ ತರಗತಿಯವರೆಗೆ ಓದಿರುವ ಯದುವೀರ್, ಅಮೆರಿಕದಲ್ಲಿ 'ಬಾಸ್ಟನ್ ವಿಶ್ವವಿದ್ಯಾಲಯ'ದಲ್ಲಿ ಅರ್ಥಶಾಸ್ತ್ರ ಮತ್ತು ಆಂಗ್ಲಭಾಷಾ ವಿಷಯಗಳಲ್ಲಿ ಬಿ.ಎ; ಪದವಿ ಅಧ್ಯಯನ ಮಾಡಿದ್ದಾರೆ.