ಶ್ವೇತ ಕುಮಾರ ಎಂಬ ರಾಜ ಸತ್ತು ಪ್ರೇತನಾಗುತ್ತಾನೆ. ಅವನ ಆತ್ಮವನ್ನು ಯಮಲೋಕಕ್ಕೆ ತೆಗೆದುಕೊಂಡು ಹೋದ ಮೇಲೆ ಇದ್ದಂತ ಕರ್ಮ ಅಧರ್ಮ ಎಲ್ಲವನ್ನು ಲೆಕ್ಕಚಾರ ಹಾಕಬೇಕಾದರೆ, ಇವನು ಈ ರೀತಿ ಪಾಪ ಕರ್ಮಗಳನ್ನು ಮಾಡಿದ್ದಾನೆ ಎಂದು ಚಿತ್ರಗುಪ್ತ ಯಮಧರ್ಮರಾಜನಿಗೆ ಹೇಳುತ್ತಾರೆ. ಆಗ ಕಡೆಯ ಆಸೆ ಏನಾದರೂ ಇದ್ದರೆ ಹೇಳು, ಅದು ಈಡೇರಿಸಿ, ನಿನಗೆ ನೀಡಬೇಕಾದ ಶಿಕ್ಷೆ ನೀಡುತ್ತೇವೆ ಎಂದು ಯಮನು ಕೇಳಿದಾಗ, ಆತ ನಾನು ಒಂದು ದಿವಸ ರಂಭೆ ಜೊತೆಯಲ್ಲಿ ಇರಬೇಕು ಎಂದು ಕೇಳುತ್ತಾನೆ. ಅವನ ಮಾತನ್ನು ಕೇಳಿ ಯಮಧರ್ಮರಾಜ ಮುಗಳ್ನಕ್ಕು, ಪ್ರೇತ ಹೋಗಿ ರಂಭೆ ಜೊತೆ ಹೇಗೆ ಕಾಲ ಕಳೆಯುತ್ತದೆ ಎಂದು ವ್ಯಂಗ್ಯವಾಡುತ್ತಾರೆ. ನಿನಗೆ ವಾಗ್ಧಾನ ನೀಡಲಾಗಿದೆ ಎಂದ ಯಮರಾಜ, ರಂಭೆಯನ್ನು ಕರೆಸಿ ಒತ್ತಾಯದ ಮೇರೆಗೆ ನೀನು ಒಂದು ದಿವಸ ಈ ಪ್ರೇತದ ಜೊತೆ ಇರಬೇಕು ಎಂದು ಆಜ್ಞೆ ಮಾಡುತ್ತಾನೆ.