ದೇಶ
ಕಾನೂನು ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ
ಇಬ್ಬರು ಅಪರಿಚಿತ ವ್ಯಕ್ತಿಗಳು ಕಾನೂನು ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಗುರುವಾರ ನಡೆದಿದೆ...
ಶ್ರೀನಗರ: ಇಬ್ಬರು ಅಪರಿಚಿತ ವ್ಯಕ್ತಿಗಳು ಕಾನೂನು ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಗುರುವಾರ ನಡೆದಿದೆ.
ಶ್ರೀನಗರದಲ್ಲಿರುವ ಕಾನೂನು ಕಾಲೇಜು ಹೊರಾಂಗಣದಲ್ಲಿ ವಿದ್ಯಾರ್ಥಿನಿ ಮೇಲೆ ಇಬ್ಬರು ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಾರಿನಲ್ಲಿ ಬಂದ ದುಷ್ಕರ್ಮಿಗಳು ಆಕೆಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ