ಕಲ್ಲಿದ್ದಲು ಹಗರಣ: ಮಧು ಕೋಡಾ ಸೇರಿ ಏಳು ಮಂದಿ ವಿರುದ್ಧ ಚಾರ್ಜ್‌ಶೀಟ್

ಮದು ಕೊಡಾ
ಮದು ಕೊಡಾ

ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮಧು ಕೋಡಾ, ಜಾರ್ಖಂಡ್‌ನ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್ ಬಸು ಸೇರಿದಂತೆ ಏಳು ಮಂದಿ ವಿರುದ್ಧ ಸಿಬಿಐ ಚಾರ್ಜ್‌ಶೀಟ್ ದಾಖಲಿಸಿದೆ.

ಸಿಬಿಐ ಆರೋಪಿಗಳ ವಿರುದ್ಧದ ಆರೋಪ ಪಟ್ಟಿಯನ್ನು ವಿಶೇಷ ಸಿಬಿಐ ಕೋರ್ಟ್‌ನ ನ್ಯಾಯಾದೀಶ ಭರತ್ ಭೂಷಣ್ ಅವರಿಗೆ ಸಲ್ಲಿಸಲಾಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಇನ್ನು ಒಂದೆರಡು ದಿನಗಳಲ್ಲಿ ಸಲ್ಲಿಸುವುದಾಗಿ ತನಿಖಾಧಿಕಾರಿಗಳು ನ್ಯಾಯಾಧೀಶರಿಗೆ ತಿಳಿಸಿದ್ದು, ಡಿಸೆಂಬರ್ 22ಕ್ಕೆ ಪರಿಗಣಿಸಲಾಗುವುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಮಧು ಕೋಡಾ ಮತ್ತು ಬಸು ಸೇರಿದಂತೆ ಕಲ್ಲಿದ್ದಲು ಮಾಜಿ ಕಾರ್ಯದರ್ಶಿ ಹೆಚ್.ಸಿ ಗುಪ್ತಾ ಮತ್ತು ಇಬ್ಬರು ಸಾರ್ವಜನಿಕ ಅಧಿಕಾರಿಗಳಾದ ಬಸಂತ್ ಕುಮಾರ್ ಭಟ್ಟಾಚಾರ್ಯ ಮತ್ತು ಬಿಪಿನ್ ಬಿಹಾರಿ ಸಿಂಗ್ ವಿರುದ್ಧ ಸಹ ಆರೋಪಪಟ್ಟಿ ಸಲ್ಲಿಸಲಾಗಿದೆ.

ವಿನಿ ಕಬ್ಬಿಣ ಮತ್ತು ಉಕ್ಕು ಉದ್ಯೋಗ್ ಲಿಮಿಟೆಟ್‌ನ ನಿರ್ದೇಶಕ ವೈಭವ್ ತುಲ್ಸ್ಯಾನ್ ಮತ್ತು ಖಾಸಗಿ ವ್ಯಕ್ತಿ ವಿಜಯ್ ಜೋಷಿ ಅವರನ್ನು ಹೆರಸನ್ನು ಸಿಬಿಐ ಅಧಿಕಾರಿಗಳು ಅಂತಿಮ ವರದಿಯಲ್ಲಿ ಸೇರಿಸಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷನ್ 120ಬಿ(ಕ್ರಿಮಿನಲ್ ಸಂಚು), 420(ವಂಚನೆ) ಆರೋಪದಡಿ ಆರೋಪಪಟ್ಟಿಯನ್ನು ಸಿಬಿಐ ಸಲ್ಲಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com