ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶನಿವಾರ ಆ್ಯಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಬೆಳಗ್ಗೆ ರಾಷ್ಟ್ರಪತಿಯವರು ಹೊಟ್ಟೆ ನೋವು ಎಂದು ಹೇಳಿದ್ದರಿಂದ ಅವರನ್ನು ಸೇನೆಯ ರಿಸರ್ಚ್ ಆ್ಯಂಡ್ ರೆಫರಲ್ ಆಸ್ಪತ್ರೆಗೆ ದಾಖಲಿಸಲಾಯಿತು.
ಬಳಿಕ ಅವರನ್ನು ಸಮಗ್ರ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ಈ ಸಂದರ್ಭದಲ್ಲಿ ವೈದ್ಯರು ಹೃದಯಕ್ಕೆ ರಕ್ತಪೂರೈಸುವ ನಾಳಗಳಲ್ಲಿ ಕೊಂಚ ತೊಂದರೆ ಇದ್ದುದನ್ನು ವೈದ್ಯರು ಪತ್ತೆ ಹಚ್ಚಿದರು.
ಹೀಗಾಗಿ ರಾಷ್ಟ್ರಪತಿಯವರಿಗೆ ಕೂಡಲೇ ಆ್ಯಂಡಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಿ ಪರಿಧಮನಿಯ ಸ್ಟೆಂಟ್ ಅಳವಡಿಸಲಾಯಿತು. ರಾಷ್ಟ್ರಪತಿಯವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯಾಧಿಕಾರಿ ತಿಳಿಸಿದ್ದಾರೆ. ಪ್ರಣಬ್ ಮುಖರ್ಜಿಯವರನ್ನು ಸೋಮವಾರ ಡಿಸ್ಚಾರ್ಜ್ ಮಾಡುವ ಸಾಧ್ಯತೆಗಳಿವೆ.
Advertisement