ಸೇನಾ ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿ

ಭದ್ರತಾ ಸಿಬ್ಬಂದಿ
ಭದ್ರತಾ ಸಿಬ್ಬಂದಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಬಳಿ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವಿನ ಗುಂಡಿನ ದಾಳಿಯಲ್ಲಿ  ಓರ್ವ ಉಗ್ರ ಬಲಿಯಾಗಿದ್ದಾನೆ.

ಕುಪ್ವಾರದ ಬಸ್ಪೋರ ಬಳಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಕೈಗೊಂಡಿದ್ದರು. ಹೀಗಾಗಿ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆಯಿತು.

ಸೇನಾ ಮೂಲಗಳ ಪ್ರಕಾರ, ಉಗ್ರರ ವಿರುದ್ಧ ಕೂಂಬಿಂಗ್ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಸಾವನ್ನಪ್ಪಿದ್ದು, ಯೋಧನೋರ್ವನಿಗೆ ಗಾಯಗಳಾಗಿವೆ. ಸದ್ಯ ಯೋಧನನ್ನು ಸೇನಾ ಕ್ಯಾಂಪ್ ಸೇರಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.



ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com