'ನೌಕಾ ಪಡೆ ಹೆಲಿಕಾಪ್ಟರನ್ನು ನನ್ನ ಕುಟುಂಬದವರು ಬಳಸಲಿಲ್ಲ'

ಗೋವಾದ ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲರಾಗಿರುವ ಐರಸ್ ರೋಡ್ರಿಕ್ಸ್ ಆರೋಪ...
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ

ನವದೆಹಲಿ: ಗೋವಾನಲ್ಲಿ ಆಯೋಜಿಸಿದ್ದ ಮದುವೆ ಕಾರ್ಯಕ್ರಮಕ್ಕೆ ತೆರಳಲು ಜೇಟ್ಲಿ ಕುಟುಂಬದವರು ನೌಕ ಪಡೆಯ ಹೆಲಿಕಾಪ್ಟರ್ನ್ನು ಬಳಿಸಿದ್ದರು ಎಂಬ ಆರೋಪವನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ನಿರಾಕರಿಸಿದ್ದಾರೆ.

ಗೋವಾದ ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲರಾಗಿರುವ ಐರಸ್ ರೋಡ್ರಿಕ್ಸ್, ಈ ಕುರಿತು ಜೇಟ್ಲಿ ವಿರುದ್ಧ ಆರೋಪ ಮಾಡಿದ್ದರು.

ಕಳೆದ ಡಿ.23 ರಂದು ಗೋವಾನಲ್ಲಿ ನಡೆದಿದ್ದ ಮದುವೆ ಸಮಾರಂಭವೊಂದಕ್ಕೆ ತೆರಳಲು ಅರುಣ್ ಜೇಟ್ಲಿ ಅವರ ಪತ್ನಿ ಹಾಗೂ ಅವರ ಮಗಳು, ನೌಕಾ ಪಡೆಯ ಹೆಲಿಕಾಪ್ಟರನ್ನು ಸ್ವಂತ ಉದ್ದೇಶಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅರುಣ್ ಜೇಟ್ಲಿ, ಆರೋಪವನ್ನು ನಿರಾಕರಿಸಿದರು.

ಮೊದಲಿಗೆ, ನೌಕಾ ಪಡೆಯ ಹೆಲಿಕಾಪ್ಟರನ್ನು  ನನ್ನ ಪತ್ನಿ ಮತ್ತು ಮಗಳು ಬಳಸಿಲ್ಲ. ಇವರಿಬ್ಬರು 23ನೇ ತಾರಿಖಿನಂದು ಗೋವಾದಲ್ಲಿ ಇದ್ದರು.

ಎರಡನೆಯದಾಗಿ, ನನ್ನ ಕುಟುಂಬದವರು ಯಾವುದೇ ಸರ್ಕಾರಿ ಸವಲತ್ತುಗಳನ್ನು ಉಪಯೋಗಿಸಿಕೊಳ್ಳದಿರುವಾಗ, ನೌಕಾ ಪಡೆಯ ಹೆಲಿಕಾಪ್ಟರನ್ನು ಹೇಗೆ ಬಳಸಲು ಸಾಧ್ಯ?

ಮೂರನೆಯದಾಗಿ, ಇದೊಂದು ಖಾಸಗಿ ಕಾರ್ಯಕ್ರಮವಾಗಿದ್ದರಿಂದ, ನನ್ನ ಕುಟುಂಬದವರು ಗೋವಾಗೆ ಬಂದಿದ್ದಾರೆ ಎಂಬುದು ರಕ್ಷಣಾ ಸಚಿವ ಪರಿಕ್ಕಾರ್ಗೆ ಸಹಾ ಈ ವಿಷಯ ಗೊತ್ತಿರಲಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲರಾಗಿರುವ ಐರಸ್ ರೋಡ್ರಿಕ್ಸ್, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಈ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com