ಮುಂಬೈ: ಮಾಜಿ ಕೇಂದ್ರ ಸಚಿವ ಸುಶೀಲ್ ಕುಮಾರ್ ಶಿಂಧೆ ಪುತ್ರಿ ಪ್ರಣತಿ ಶಿಂಧೆ ಅವರಿಗೆ ಮಜ್ಲೀಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಂಐಎಂ) ನೋಟೀಸ್ ಕಳುಹಿಸಿದೆ.
ಎಂಐಎಂ ಕುರಿತು ಪ್ರಣತಿ ಶಿಂಧೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಎಂಐಎಂ, ಪ್ರಣತಿ ಶಿಂಧೆ ಕೂಡಲೇ ಕ್ಷಮೆಯಾಚಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ.
ಕಳೆದ ವಾರ ಸೋಲಾಪುರ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ರಣತಿ ಶಿಂಧೆ, ಎಂಐಎಂ ಸಂಘಟನೆ ಧರ್ಮಗಳ ನಡುವೆ ಒಡಕು ತರುವ ಕಾರ್ಯ ಮಾಡುತ್ತಿದೆ. ಯಾವುದೇ ಪಕ್ಷವಾಗಲಿ ಧರ್ಮಗಳ ನಡುವೆ ಒಡಕು ತರಲೆತ್ನಿಸಿದರೆ ಅದು ಭಾರತದ ವಿರೋಧಿಯಾಗಿರುತ್ತದೆ ಎಂದು ಹೇಳಿದ್ದರು.
ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಎಂಐಎಂ, ಎಂಟು ದಿನದೊಳಗಾಗಿ ಪ್ರಣತಿ ಶಿಂಧೆ ಕ್ಷಮೆಯಾಚಿಸಬೇಕು. ಇಲ್ಲವಾದರೆ, ನ್ಯಾಯಾಲಯದಲ್ಲಿ ಪ್ರಣತಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗವುದು ಎಂದು ಗಡುವು ನೀಡಿದೆ.
Advertisement