ವಿಶ್ವ ಭಯೋತ್ಪಾದನೆ ನಿಗ್ರಹಕ್ಕೆ ತಂತ್ರಗಾರಿಕೆ ಅಗತ್ಯ: ಮೋದಿ

ವಿಶ್ವ ಭಯೋತ್ಪಾದನೆ ಹತ್ತಿಕ್ಕಲು ದೇಶಗಳ ಜಂಟಿ ತಂತ್ರಗಾರಿಕೆ ಅಗತ್ಯವಾಗಿದೆ...
ವಿಶ್ವ ಭಯೋತ್ಪಾದನೆ ನಿಗ್ರಹಕ್ಕೆ ತಂತ್ರಗಾರಿಕೆ ಅಗತ್ಯ: ಮೋದಿ
Updated on

ಬ್ರಿಸ್ಬೇನ್: ವಿಶ್ವ ಭಯೋತ್ಪಾದನೆ ಹತ್ತಿಕ್ಕಲು ದೇಶಗಳ ಜಂಟಿ ತಂತ್ರಗಾರಿಕೆ ಅಗತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿ ಪ್ರಸಕ್ತ ಸಾಲಿನ ಜಿ-20 ದೇಶಗಳ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಅವರು, ವಿಶ್ವ ಮಟ್ಟದಲ್ಲಿ ಬೆಳೆದಿರುವ ಭಯೋತ್ಪಾದನೆ ಹತ್ತಿಕ್ಕಬೇಕಾದರೆ, ಎಲ್ಲಾ ದೇಶಗಳು ಒಟ್ಟಾಗಿ ವ್ಯೂಹ ರಚಿಸಬೇಕು. ಆಗ ಮಾತ್ರ ಭಯೋತ್ಪಾದನೆಯನ್ನು ಬುಡದಿಂದ ಕಿತ್ತೊಗೆಯಲು ಸಾಧ್ಯ ಎಂದು ಮೋದಿ ತಿಳಿಸಿದ್ದಾರೆ.

ದೇಶಗಳ ನಡುವಿನ ಸಹಕಾರ ಸಂಬಂಧ ಸುಧಾರಣೆ ಮುಖ್ಯವಾಗಿದೆ. ಆದರೆ ಈ ಸುಧಾರಣೆ ಜನತೆಯಿಂದಲೇ ಆಗಬೇಕಿದೆ ಎಂದ ಅವರು, ತಂತ್ರಜ್ಞಾನ ಮತ್ತು ಆಡಳಿತ ಕಾರ್ಯವಿಧಾನ ಸುಧಾರಣೆಯಾಗಬೇಕಿದೆ ಎಂದು ಹೇಳಿದ್ದಾರೆ.  

ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬ್ಬೋಟ್, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಸೇರಿ ಹಲವರು ಸಭೆಯಲ್ಲಿ ಭಾಗಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com