ಹೆಲಿಕಾಫ್ಟರ್ ಹಗರಣ: ಗೌತಮ್ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್

ವಿವಿಐಪಿ ಹೆಲಿಕಾಫ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಗೌತಮ್ ಖೈತಾನ್ ಅವರು...
ಹೆಲಿಕಾಫ್ಟರ್ ಹಗರಣ: ಗೌತಮ್ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್
Updated on

ನವದೆಹಲಿ: ವಿವಿಐಪಿ ಹೆಲಿಕಾಫ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಗೌತಮ್ ಖೈತಾನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಬುಧವಾರ ಪೂರ್ಣಗೊಂಡಿದ್ದು, ಆದೇಶವನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿದೆ.

ಉದ್ಯಮಿ ಗೌತಮ್ ಖೈತಾನ್ ಜಾಮೀನು ಅರ್ಜಿ ವಿಚಾರಣೆ ಸಂಬಂಧಿಸಿದಂತೆ ವಾದ-ಪ್ರತಿವಾದ ಆಲಿಸಿದ ನ್ಯಾಯಾಮೂರ್ತಿ ವಿ.ಪಿ ವೈಶ್ ಅವರು ಆದೇಶವನ್ನು ಕಾಯ್ದಿರಿಸಿದ್ದಾರೆ.

2010ರಲ್ಲಿ ಅಗಸ್ತಾ ವೆಸ್ಟ್‌ಲ್ಯಾಂಡ್ ಕಂಪನಿಯೊಂದಿಗೆ 12 ವಿವಿಐಪಿ ಹೆಲಿಕಾಫ್ಟರ್ ಖರೀದಿಗೆ ಹಾಕಲಾಗಿತ್ತು. ಆದರೆ ಇದರಲ್ಲಿ 3,600 ಕೋಟಿ ಅಕ್ರ ನಡೆದಿರುವ ವಿಷಯ ಬಳಿಕ ಬಹಿರಂಗವಾಗಿತ್ತು. ವಿಐಪಿ ಹೆಲಿಕಾಫ್ಟರ್‌ನಲ್ಲಿ ಅಕ್ರಮ ಲೇವಾದೇವಿ ಆರೋಪಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧನಕ್ಕೊಳಪಡಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com