ಕಲ್ಲಿದ್ದಲು ಹಗರಣ: ಮುಂದಿನ ತನಿಖೆಗೆ ಕೋರ್ಟ್ ಸೂಚನೆ

ಕಲ್ಲಿದ್ದಲು ಬ್ಲಾಕ್ ಹಂಚಿಕೆ ಪ್ರಕರಣದ ತನಿಖೆಯನ್ನು ಮುಂದುವರೆಸಿ ಎಂದು ಸಿಬಿಐಗೆ ವಿಶೇಷ ಕೋರ್ಟ್...
ಕಲ್ಲಿದ್ದಲು ಹಗರಣ: ಮುಂದಿನ ತನಿಖೆಗೆ ಕೋರ್ಟ್ ಸೂಚನೆ
Updated on

ನವದೆಹಲಿ: ಕಲ್ಲಿದ್ದಲು ಬ್ಲಾಕ್ ಹಂಚಿಕೆ ಪ್ರಕರಣದ ತನಿಖೆಯನ್ನು ಮುಂದುವರೆಸಿ ಎಂದು ಸಿಬಿಐಗೆ ವಿಶೇಷ ಕೋರ್ಟ್ ಗುರುವಾರ ಸೂಚಿಸಿದೆ.

ವಿಶೇಷ ಸಿಬಿಐ ನ್ಯಾಯಾಧೀಶರಾದ ಭರತ್ ಪರಾಶರ್ ಅವರು, ಕಲ್ಲಿದ್ದಲು ಬ್ಲಾಕ್ ಹಂಚಿಕೆ ಹಗರಣದ ತನಿಖೆಯನ್ನು ಮುಂದುವೆರೆಸಿ, ಪ್ರಗತಿ ತನಿಖಾ ವರದಿಯನ್ನು ಡಿಸೆಂಬರ್ 19ರೊಳಗಾಗಿ ಸಲ್ಲಿಸಬೇಕೆಂದು ಸಿಬಿಐಗೆ ಸೂಚಿಸಿದ್ದಾರೆ.

ಕಲ್ಲಿದ್ದಲು ಬ್ಲಾಕ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ವಿಜಯ್ ದರ್ದಾ ಸೇರಿದಂತೆ ಅನೇಕರ ವಿರುದ್ಧ ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು.
ವಿಜಯ್ ದರ್ದಾ, ಅವರ ಪುತ್ರ ದೇವೇಂದ್ರ ದರ್ದಾ, ನಾಗ್ಪುರ ಮೂಲದ ಎಎಂಆರ್ ಐರನ್ ಆ್ಯಂಡ್ ಸ್ಟೀಲ್ ಪ್ರೈ.ಲಿ. ಮತ್ತು ಅದರ ನಿರ್ದೇಶಕ ಮನೋಜ್ ಜೈಸ್ವಾಲ್ ಅವರನ್ನು ಹೆಸರಿಸಲಾಗಿತ್ತು.

ಇವರೆಲ್ಲರೂ ಮೋಸದಿಂದ ಕಲ್ಲಿದ್ದಲು ಬ್ಲಾಕ್‌ಗಳನ್ನು ಪಡೆದಿದ್ದು, ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com