ವಿರಿಧುನಗರ್: ಸರ್ಕಾರಿ ಶಾಲೆಯಲ್ಲೇ ವಿದ್ಯಾರ್ಥಿ ಎದುರು ಸಹ ವಿದ್ಯಾರ್ಥಿಯೊಬ್ಬನನ್ನು ಅಪರಿಚಿತ ಯುವಕನೊರ್ವ ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ಶುಕ್ರವಾರ ನಡೆಸಿದೆ.
ವಿರುದ್ಧನಗರ್ ಜಿಲ್ಲೆಯ ಪಂದಾಲ್ಕುಡಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನನ್ನು ಅದೇ ಊರಿನ ಯುವಕನೊರ್ವ ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿಯನ್ನು ಚೂರಿಯಿಂದ ಇರಿದ ನಂತರ ಆತ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಹಳ್ಳಿಯಲ್ಲಿ ಸಣ್ಣ ಪುಟ್ಟ ವಿವಾದಗಳು ನಡೆಯುತ್ತವೆ. ಇದೇ ವೈಷಮ್ಯದಿಂದ ವಿದ್ಯಾರ್ಥಿಯನ್ನು ಇರಿದು ಕೊಲೆ ಮಾಡಿರಬೇಕು. ಆ ನಿಟ್ಟಿನಲ್ಲಿ ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಶಾಲೆಯನ್ನು ಮುಚ್ಚಲಾಗಿದ್ದು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ.
Advertisement