ಭಾರತದಲ್ಲಿನ ದಾಳಿಗಳ ಹಿಂದೆ ಪಾಕ್ ಕೈವಾಡ: ರಾಜನಾಥ್ ಸಿಂಗ್

ಭಾರತದಲ್ಲಿ ನಡೆಯುವ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನ..
ರಾಜನಾಥ್ ಸಿಂಗ್ (ಸಂಗ್ರಹ ಚಿತ್ರ)
ರಾಜನಾಥ್ ಸಿಂಗ್ (ಸಂಗ್ರಹ ಚಿತ್ರ)

ಗುವಾಹತಿ: ಭಾರತದಲ್ಲಿ ನಡೆಯುವ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನ ಸರ್ಕಾರದ ಕೈವಾಡ ಇದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಶನಿವಾರ ನೇರ ಆರೋಪ ಮಾಡಿದ್ದಾರೆ.

12 ಮಂದಿಯನ್ನು ಬಲಿ ಪಡೆದ ಜಮ್ಮು ಮತ್ತು ಕಾಶ್ಮೀರದ ಅರ್ನಿಯಾ ಸೆಕ್ಟರ್‌ನಲ್ಲಿ ನಡೆದ ಗುಂಡಿನ ಕಾಳಗವನ್ನು ಪ್ರಸ್ತಾಪಿಸಿದ ಸಿಂಗ್, ದಾಳಿಯ ಹಿಂದೆ ಪಾಕ್ ಸರ್ಕಾರದ ಕೈವಾಡ ಇಲ್ಲ ಎನ್ನುವುದು ಸುಳ್ಳು ಎಂದಿದ್ದಾರೆ.

49ನೇ ಅಖಿಲ ಭಾರತ ಡಿಜಿಪಿ ಮತ್ತು ಐಜಿಪಿ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವರು, ಪಾಕಿಸ್ತಾನದ ಐಎಸ್‌ಐ ಅನ್ನು ಉಗ್ರ ಸಂಘಟನೆ ಎಂದು ಘೋಷಿಸುವಂತೆ ಪಾಕಿಸ್ತಾನಕ್ಕೆ ಕೇಳಿಕೊಂಡರು.

ಉಗ್ರ ಸಂಘಟನೆಗಳಿಂದ ದೇಶದ ಭದ್ರತೆಗೆ ಧಕ್ಕೆಯಾಗಲಿದೆ. ಅಲ್-ಖೈದಾ ಉಗ್ರ ಸಂಘಟನೆ ತುಂಬಾ ಅಪಾಯಕಾರಿಯಾಗಿದ್ದು, ಅದನ್ನು ಭಾರತ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಿಂಗ್ ತಿಳಿಸಿದರು.

ಇದೇ ವೇಳೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಗೃಹ ಸಚಿವರು ಸೂಚಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com