ಗುಂಡು ಹಾರಿಸಿ ಇಬ್ಬರು ಪೊಲೀಸರನ್ನು ಕೊಂದ ಡಕಾಯಿತರು

ಡಕಾಯಿತರು ಗುಂಡು ಹಾರಿಸಿ ಇಬ್ಬರು ಪೊಲೀಸರ ಬರ್ಬರ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ನೆಲಗೊಂಡ ಚೆಕ್ ಪೋಸ್ಟ್ ಬಳಿ ನಡೆದಿದೆ.
ಗುಂಡಿನ ದಾಳಿ
ಗುಂಡಿನ ದಾಳಿ

ನೆಲಗೊಂಡ(ತೆಲಂಗಾಣ): ಡಕಾಯಿತರು ಗುಂಡು ಹಾರಿಸಿ ಇಬ್ಬರು ಪೊಲೀಸರ ಬರ್ಬರ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ನೆಲಗೊಂಡ ಚೆಕ್ ಪೋಸ್ಟ್ ಬಳಿ ನಡೆದಿದೆ.

ಸೂರ್ಯಪೇಟ್ ಚೆಕ್‌ ಪೋಸ್ಟ್‌ ಬಳಿ ಪೊಲೀಸರ ಪರಿಶೀಲನೆ ವೇಳೆ ದರೋಡೆಕೋರರಿದ್ದ ಕಾರನ್ನು ಅಡ್ಡಗಟ್ಟಿದ್ದರು. ಈ ವೇಳೆ ಡಕಾಯಿತರಿಂದ ಪೊಲೀಸರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆದಿದೆ.

ಈ ದಾಳಿಯಲ್ಲಿ ಓರ್ವ ಪೊಲೀಸ್ ಪೇದೆ ಹಾಗೂ ಮತ್ತೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿ ಮೃತಪಟ್ಟಿದ್ದಾರೆ. ಅಲ್ಲದೆ ಸರ್ಕಲ್ ಇನ್ಸ್ ಪೆಕ್ಟರ್ ಸೇರಿದಂತೆ 3 ಪೊಲೀಸರು, ಇಬ್ಬರು ನಾಗರಿಕರಿಗೂ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ತೆಲಂಗಾಣದ ಖಮ್ಮಂ ಜಿಲ್ಲೆಯಿಂದ ಹೈದ್ರಾಬಾದ್‌ಗೆ ಬರುತ್ತಿದ್ದ ಕಾರಿನಲ್ಲಿ ದರೋಡೆಕೋರರು ಇದ್ದರು ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com