ಕೊಡೈಕೆನಾಲ್ ನಲ್ಲಿ ಭೀಕರ ರಸ್ತೆ ಅಪಘಾತ: 9 ಮಂದಿ ದುರ್ಮರಣ

ಹಾಲಿನ ಟ್ಯಾಂಕರ್ ಗೆ ಟೊಯೋಟಾ ಕ್ವಾಲಿಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ದಿಂಡಿಗಲ್: ಹಾಲಿನ ಟ್ಯಾಂಕರ್ ಗೆ ಟೊಯೋಟಾ ಕ್ವಾಲಿಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕೊಡೈಕೆನಾಲ್ ಬಳಿ ನಡೆದಿದೆ.

ತಮಿಳುನಾಡಿನ ದಿಂಡಿಗಲ್ ಬಳಿ ಇಱುವ ವತ್ತಲಗುಂಡು ರಸ್ತೆಯ ಸಿದ್ದಯ್ಯನಕೋಟೆ ಬಳಿ ಈ ದುರಂತ ಸಂಭವಿಸಿದ್ದು, ಟೊಯೋಟಾ ಕ್ವಾಲಿಸ್ ನಲ್ಲಿದ್ದ 9 ಜನರು ದುರ್ಮರಣ ಹೊಂದಿದ್ದಾರೆ.

ಮೃತರೆಲ್ಲರೂ ತಮಿಳುನಾಡಿನ ಅರವಕುಂಚಿ ನಿವಾಸಿಗಳಾಗಿದ್ದು, ಕೊಡೈಕೆನಾಲ್ ನಿಂದ ಸಿದ್ದಯ್ಯಕೋಟೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಭೀಕರ ರಸ್ತೆ ಅಪಘಾತವಾಗಿದೆ.

ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com