ಬೆಂಗಳೂರು: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಆಯೋಜಿಸಿದ್ದ ಔತಣಕೂಟದಲ್ಲಿ ಭಾಗವಹಿಸಲು ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದಗೌಡ ಅವರು ಶುಕ್ರವಾರ ದಿಲ್ಲಿಗೆ ತೆರಳಿದರು.
ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಗುರುವಾರ ಭಾಗವಹಿಸಿದ್ದ ಡಿ.ವಿ. ಸದಾನಂದಗೌಡ ಶುಕ್ರವಾರ ನಗರದಿಂದ ದಿಲ್ಲಿಗೆ ಪ್ರಯಾಣ ಬೆಳೆಸಿದರು. ರಾಷ್ಟ್ರಪತಿ ಅವರ ಔತಣಕೂಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಭಾಗವಹಿಸಲಿದ್ದಾರೆ.
ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರೂ ಶನಿವಾರ ರಾತ್ರಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಭೋಜನಕೂಟ ಆಯೋಜಿಸಿದ್ದಾರೆ. ಇದರಲ್ಲಿಯೂ ಡಿವಿಎಸ್ ಭಾಗವಹಿಸಲಿದ್ದಾರೆ.
Advertisement