ಏ.19ರಂದು ರೈತ ಸಮಾವೇಶ ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ

ಸುಮಾರು ಎರಡು ತಿಂಗಳಿಂದ ನಾಪತ್ತೆಯಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಏಪ್ರಿಲ್ 10ರಂದು ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ....
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ನವದೆಹಲಿ: ಸುಮಾರು ಎರಡು ತಿಂಗಳಿಂದ ನಾಪತ್ತೆಯಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಏಪ್ರಿಲ್ 10ರಂದು ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ರೈತರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು, ಏ.19ಕ್ಕೆ ನಡೆಯುವ ರೈತರ ಸಮಾವೇಶಕ್ಕೆ ದೇಶದ ವಿವಿಧ ಕಡೆಯಿಂದ ಲಕ್ಷಾಂತರ ರೈತರು ಆಗಮಿಸುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಸೇರಿದಂತೆ ಇತರ ನಾಯಕರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.

ಸುದೀರ್ಘ ರಜೆಯಲ್ಲಿರುವ ರಾಹುಲ್ ಗಾಂಧಿ ಅವರು ವಾಪಸ್ ಬರುವುದು ಯಾವಾಗ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ದಿಗ್ವಿಜಯ್ ಸಿಂಗ್ ಅವರು, 'ರಾಹುಲ್ ಗಾಂಧಿ ಅವರು ಸಹ ಈ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ' ಎಂದರು.

44 ವರ್ಷದ ಕಾಂಗ್ರೆಸ್ ಯುವರಾಜ ಫೆಬ್ರುವರಿ 23ರಿಂದ ಬಜೆಟ್ ಅಧಿವೇಶನ ಆರಂಭವಾದಾಗಿನಿಂದ ರಜೆಯಲ್ಲಿದ್ದು, ಅವರು ಎಲ್ಲಿದ್ದಾರೆ ಎಂಬುದರ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಇಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com