ಇಂದು ಕನ್ನಡದ ಮೇರು ನಟ ಡಾ.ರಾಜ್ ಕುಮಾರ್ ಪುಣ್ಯತಿಥಿ

ಕನ್ನಡದ ವರನಟ ಪದ್ಮಭೂಷಣ ಡಾ. ರಾಜ್ ಕುಮಾರ್‌ ಇಂದಿಗೆ ನಮ್ಮನ್ನಗಲಿ ಒಂಬತ್ತು ವರ್ಷಗಳಾಗಿವೆ. ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್ ಕುಮಾರ್‌ ಸ್ಮಾರಕಕ್ಕೆ ಈಗಾಗಲೇ ಭೇಟಿ ನೀಡಿರುವ ರಾಜ್ ಕುಟುಂಬ ಹಾಗೂ ರಾಜ್ ಕುಮಾರ್ ಅವರ ಸಾವಿರಾರು ಅಭಿಮಾನಿಗಳು ನಮನ ಸಲ್ಲಿಸುತ್ತಿದ್ದಾರೆ...
ಇಂದು ಕನ್ನಡದ ಮೇರು ನಟ ಡಾ.ರಾಜ್ ಕುಮಾರ್ ಪುಣ್ಯತಿಥಿ (ಸಂಗ್ರಹ ಚಿತ್ರ)
ಇಂದು ಕನ್ನಡದ ಮೇರು ನಟ ಡಾ.ರಾಜ್ ಕುಮಾರ್ ಪುಣ್ಯತಿಥಿ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಕನ್ನಡದ ವರನಟ  ಪದ್ಮಭೂಷಣ ಡಾ. ರಾಜ್ ಕುಮಾರ್‌ ಇಂದಿಗೆ ನಮ್ಮನ್ನಗಲಿ ಒಂಬತ್ತು ವರ್ಷಗಳಾಗಿವೆ. ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್ ಕುಮಾರ್‌ ಸ್ಮಾರಕಕ್ಕೆ ಈಗಾಗಲೇ ಭೇಟಿ ನೀಡಿರುವ ರಾಜ್ ಕುಟುಂಬ ಹಾಗೂ ರಾಜ್ ಕುಮಾರ್ ಅವರ ಸಾವಿರಾರು ಅಭಿಮಾನಿಗಳು ನಮನ ಸಲ್ಲಿಸುತ್ತಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಾವಿರಾರು ಜನ ಡಾ. ರಾಜ್‌ ಅವರ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸುತ್ತಿದ್ದು, ಸಮಾಧಿ ದರ್ಶನದ ನಂತರ ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಅನ್ನದಾನವನ್ನು ರಾಜ್ ಅವರ ಹೆಸರಿನಲ್ಲಿ ಆಯೋಜಿಸಲಾಗಿದೆ.

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಥಾಮಸ್ ಡಿಸೋಜ, ನಿರ್ಮಾಪಕ ಕೆ.ಸಿ.ಎನ್.ಚಂದ್ರಶೇಖರ್, ನಿರ್ದೇಶಕ ದೊರೆಭಗವಾನ್ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್, ಹಿರಿಯ ನಟ ಶಿವರಾಂ, ಮುಂತಾದ ನಟ-ನಟಿಯರು ಹಾಗೂ ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿ ನೆರೆದಿದ್ದು, ನೆಚ್ಚಿನ ನಟನಿಗೆ ನಮನ ಸಲ್ಲಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com