ಕೋಲ್ಕತಾ: ನಟಿ ಹಾಗೂ ಬಿಜೆಪಿ ಸದಸ್ಯೆ ರೂಪಾ ಗಂಗೂಲಿಯ ಮೇಲೆ ತೃಣಮೂಲ ಕಾಂಗ್ರೆಸ್ ಸದಸ್ಯರಿಂದ ಹಲ್ಲೆ ನಡೆದಿದೆ.
ಕೋಲ್ಕತ್ತಾದಲ್ಲಿ ನಡೆಯಲಿರುವ ಪಾಲಿಕೆ ಚುನಾವಣೆಗಾಗಿ ಬಿಜೆಪಿ ರೂಪಾಗಂಗೂಲಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ ನಡೆದಾಗ, ರೂಪಾ ಗಂಗೂಲಿ ಮೇಲೆಯೂ ಹಲ್ಲೆ ನಡೆದದ್ದಲ್ಲದೆ ಅವರ ಕಾರು ಕೂಡ ಜಖಂ ಆಗುವಂತಾಯ್ತು.
ರೂಪಾ ಗಂಗೂಲಿ ದೂರದರ್ಶನದಲ್ಲಿ ಬರುತ್ತಿದ್ದ ಮಹಾಭಾರತ ಧಾರಾವಾಹಿಯಲ್ಲಿ ದ್ರೌಪದಿ ಪಾತ್ರದಿಂದ ಜನಪ್ರಿಯರಾಗಿದ್ದ ಅವರು ಇತ್ತೀಚೆಗೆ ಬಿಜೆಪಿ ಸೇರಿ, ಸ್ಥಳೀಯ ಸಂಸ್ಥೆಯ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು.
Advertisement