ಅಮೇಥಿ: ಚಲಿಸುತ್ತಿದ್ದ ಸರ್ಕಾರಿ ಬಸ್ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಪೀಪಾರ್ಪುರ್ನಲ್ಲಿ ಸಂಭವಿಸಿದೆ.
42 ಜನ ಪ್ರಯಾಣಿಕರನ್ನು ಹೊತ್ತ ಬಸ್ ಸುಲ್ತಾನ್ಪುರಕ್ಕೆ ಹೋಗುತ್ತಿತ್ತು. ಈ ವೇಳೆ ಪೀಪಾರ್ಪುರ್ನ ರಾಮ್ ಗಾಂವ್ ಎಂಬ ಗ್ರಾಮದ ಬಳಿ ಬರುತ್ತಿದಂತೆ ಎಂಜಿನ್ನಲ್ಲಿ ಷಾರ್ಟ್ ಸರ್ಕ್ಯೂಟ್ ಆಗಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಜೀವ ದಹನವಾಗಿದ್ದು, ಆರು ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿವೆ.
ಇನ್ನುಳಿದಂತೆ ಹಲವರು ಪ್ರಯಾಣಿಕರು ಕಿಟಕಿ ಗಾಜುಗಳನ್ನು ಒಡೆದು ಹೊರಬಂದಿದ್ದು, ಹೆಚ್ಚು ಪ್ರಾಣಹಾನಿ ಸಂಭವಿಸಿಲ್ಲ.
ಆದರೆ, 9 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. ಗಾಯಗೊಂಡಿರುವ ಆರು ಜನರ ಸ್ತಿತಿ ಚಿಂತಾಜನಕವಾಗಿದೆ ಎಂದು ಅಮೇಥಿ ಪೊಲೀಸ್ ವರಿಷ್ಠಾಧಿಕಾರಿ ಹೀರಾಲಾಲ್ ತಿಳಿಸಿದ್ದಾರೆ.
Advertisement