ಚಲಿಸುತ್ತಿದ್ದ ಬಸ್‌ನಲ್ಲಿ ಅಗ್ನಿ ಅವಘಡ: 9 ಜನ ಸಜೀವ ದಹನ

ಚಲಿಸುತ್ತಿದ್ದ ಸರ್ಕಾರಿ ಬಸ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ...
ಬೆಂಕಿ ಅವಘಡ
ಬೆಂಕಿ ಅವಘಡ
Updated on

ಅಮೇಥಿ: ಚಲಿಸುತ್ತಿದ್ದ ಸರ್ಕಾರಿ ಬಸ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಪೀಪಾರ್‌ಪುರ್‌ನಲ್ಲಿ ಸಂಭವಿಸಿದೆ.

42 ಜನ ಪ್ರಯಾಣಿಕರನ್ನು ಹೊತ್ತ ಬಸ್ ಸುಲ್ತಾನ್‌ಪುರಕ್ಕೆ ಹೋಗುತ್ತಿತ್ತು. ಈ ವೇಳೆ ಪೀಪಾರ್‌ಪುರ್‌ನ ರಾಮ್ ಗಾಂವ್ ಎಂಬ ಗ್ರಾಮದ ಬಳಿ ಬರುತ್ತಿದಂತೆ ಎಂಜಿನ್‌ನಲ್ಲಿ ಷಾರ್ಟ್ ಸರ್ಕ್ಯೂಟ್ ಆಗಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಜೀವ ದಹನವಾಗಿದ್ದು, ಆರು ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿವೆ.

ಇನ್ನುಳಿದಂತೆ ಹಲವರು ಪ್ರಯಾಣಿಕರು ಕಿಟಕಿ ಗಾಜುಗಳನ್ನು ಒಡೆದು ಹೊರಬಂದಿದ್ದು, ಹೆಚ್ಚು ಪ್ರಾಣಹಾನಿ ಸಂಭವಿಸಿಲ್ಲ.

ಆದರೆ, 9 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. ಗಾಯಗೊಂಡಿರುವ ಆರು ಜನರ ಸ್ತಿತಿ ಚಿಂತಾಜನಕವಾಗಿದೆ  ಎಂದು  ಅಮೇಥಿ  ಪೊಲೀಸ್ ವರಿಷ್ಠಾಧಿಕಾರಿ ಹೀರಾಲಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com