ಚಲಿಸುತ್ತಿದ್ದ ಬಸ್‌ನಲ್ಲಿ ಅಗ್ನಿ ಅವಘಡ: 9 ಜನ ಸಜೀವ ದಹನ

ಚಲಿಸುತ್ತಿದ್ದ ಸರ್ಕಾರಿ ಬಸ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ...
ಬೆಂಕಿ ಅವಘಡ
ಬೆಂಕಿ ಅವಘಡ

ಅಮೇಥಿ: ಚಲಿಸುತ್ತಿದ್ದ ಸರ್ಕಾರಿ ಬಸ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಪೀಪಾರ್‌ಪುರ್‌ನಲ್ಲಿ ಸಂಭವಿಸಿದೆ.

42 ಜನ ಪ್ರಯಾಣಿಕರನ್ನು ಹೊತ್ತ ಬಸ್ ಸುಲ್ತಾನ್‌ಪುರಕ್ಕೆ ಹೋಗುತ್ತಿತ್ತು. ಈ ವೇಳೆ ಪೀಪಾರ್‌ಪುರ್‌ನ ರಾಮ್ ಗಾಂವ್ ಎಂಬ ಗ್ರಾಮದ ಬಳಿ ಬರುತ್ತಿದಂತೆ ಎಂಜಿನ್‌ನಲ್ಲಿ ಷಾರ್ಟ್ ಸರ್ಕ್ಯೂಟ್ ಆಗಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಜೀವ ದಹನವಾಗಿದ್ದು, ಆರು ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿವೆ.

ಇನ್ನುಳಿದಂತೆ ಹಲವರು ಪ್ರಯಾಣಿಕರು ಕಿಟಕಿ ಗಾಜುಗಳನ್ನು ಒಡೆದು ಹೊರಬಂದಿದ್ದು, ಹೆಚ್ಚು ಪ್ರಾಣಹಾನಿ ಸಂಭವಿಸಿಲ್ಲ.

ಆದರೆ, 9 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. ಗಾಯಗೊಂಡಿರುವ ಆರು ಜನರ ಸ್ತಿತಿ ಚಿಂತಾಜನಕವಾಗಿದೆ  ಎಂದು  ಅಮೇಥಿ  ಪೊಲೀಸ್ ವರಿಷ್ಠಾಧಿಕಾರಿ ಹೀರಾಲಾಲ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com