ರಾಯಚೂರು: 2013ರಲ್ಲಿ ನಡೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಟಿ ಪೂಜಾ ಗಾಂಧಿ ವಿರುದ್ಧ ರಾಯಚೂರಿನ 2ನೇ ಜೆಎಂಎಫ್ ಸಿ ಕೋರ್ಟ್ ಬಂಧನ ವಾರೆಂಟ್ ಜಾರಿ ಮಾಡಿದೆ.
ಚುನಾವಣೆ ಪ್ರಚಾರದ ವೇಳೆ ಪರವಾನಗಿ ಪಡೆಯದ ವಾಹನದಲ್ಲಿ ತೆರಳಿ ಅವರು ಪ್ರಚಾರ ಕೈಗೊಂಡಿದ್ದಾರೆ ಎಂದು ಚುನಾವಣಾಧಿಕಾರಿಗಳು ನೀಡಿದ ದೂರು ಆಧರಿಸಿ, ನಗರದ ಸದರ್ ಬಜಾರ್ ಠಾಣೆಯಲ್ಲಿ ಪೂಜಾ ಗಾಂಧಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಮೂರು ಬಾರಿ ಗೈರು ಹಾಜರಾಗಿದ್ದರಿಂದ ನ್ಯಾಯಾಧೀಶರು ಪೂಜಾ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ್ದಾರೆ.
ಜಾಮೀನಿಗಾಗಿ ಪೂಜಾ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಾಧೀಶರು ಪೂಜಾ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ್ದಾರೆ.
Advertisement