ದಲಿತ ವಿದ್ಯಾರ್ಥಿಗಳಿಂದ ಶೌಚಾಲಯ ತೊಳೆಸುತ್ತಿದ್ದ 8 ಶಿಕ್ಷಕರ ಬಂಧನ

ದಲಿತ ಮಕ್ಕಳಿಂದ ಮಲ ತೊಳೆಸುತ್ತಿದ್ದ 8 ಮಂದಿ ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತಿರುನಲ್ವೇಲಿ: ದಲಿತ ಮಕ್ಕಳಿಂದ ಮಲ ತೊಳೆಸುತ್ತಿದ್ದ 8 ಮಂದಿ ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ.
ತಿರುನಲ್ವೇಲಿ ಜಿಲ್ಲೆಯ ಹಳ್ಳಿಯೊಂದರಲ್ಲಿರುವ ಅನುದಾನಿತ ಪ್ರೌಢಶಾಲೆಯ ಶಿಕ್ಷಕರು ಪ್ರತಿ ತಿಂಗಳು ದಲಿತ ವಿದ್ಯಾರ್ಥಿಗಳಿಂದ ಮಲ ಸ್ವಚ್ಛ ಮಾಡಿಸುತ್ತಿದ್ದಾರೆ.
ಕಳೆದ ಕೆಲ ತಿಂಗಳುಗಳಿಂದ ಈ ಪರಿಪಾಠ ಹೆಚ್ಚಾದ ಹಿನ್ನಲೆಯಲ್ಲಿ ಆಗಾಗ ದೂರುಗಳು ಬರುತ್ತಿದ್ದವು. ಆ ಊರಿನ ದಲಿತರು ಕೆಲವು ಬಾರಿ ಪ್ರತಿಭಟನೆ ನಡೆಸಿದ್ದರೂ, ದಲಿತ ವಿದ್ಯಾರ್ಥಿಗಳಿಂದ ಶೌಚಾಲಯ ತೊಳೆಸುವುದನ್ನು ಶಿಕ್ಷಕರು ನಿಲ್ಲಿಸರಿಲಿಲ್ಲ.
ಬಲವಂತವಾಗಿ ಶಿಕ್ಷಕರು ಈ ಕೆಲಸ ಮಾಡಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಈ ವಿಷಯ ಗಂಭೀರ ರೂಪ ಪಡೆದ ಹಿನ್ನಲೆಯಲ್ಲಿ ಎಚ್ಚೆತ್ತ ಪೊಲೀಸರು ಎಂಟು ಜನ ಶಿಕ್ಷಕರನ್ನು ಬಂಧಿಸಿದ್ದಾರೆ.
ಪೋಷಕರು ಹೇಳುವ ಪ್ರಕಾರ, 6 ರಿಂದ 8ನೇ ತರಗತಿಯಲ್ಲಿರುವ ಅವರ ಮಕ್ಕಳಿಂದ ಮಲ ಸ್ವಚ್ಛ ಮಾಡಿಸಲಾಗುತ್ತದೆ. ಕೆಲಸ ಮಾಡದಿದ್ದರೆ ಶಿಕ್ಷಕರು ಕಠಿಣ ಶಿಕ್ಷೆ ಕೊಡುತ್ತಾರೆ. ಇದರಿಂದಾಗಿ ಕೆಲ ಮಕ್ಕಳು ಶಾಲೆಗೆ ಹೋಗುವುದನ್ನೇ ಬಿಟ್ಟಿದ್ದಾರಂತೆ.
ಪೊಲೀಸರು ಶಿಕ್ಷಕರನ್ನು ಬಂಧಿಸಿದ್ದಾರೆ. ನಮಗೆ ನ್ಯಾಯ ಸಿಗಬೇಕು ಎಂದು ದಲಿತ ಪೋಷಕರು ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com