ಕೇರಳ ಪ್ರೊಫೆಸರ್ ಕೈ ಕತ್ತರಿಸಿದ ಪ್ರಕರಣ: 13 ದೋಷಿತರು

ಪ್ರವಾದಿ ಮೊಹಮ್ಮದ್ ಅವರನ್ನು ಅಪಮಾನಕಾರಿ ರೀತಿಯಲ್ಲಿ ಉಲ್ಲೇಖನ ಮಾಡಿದ್ದರು ಎಂಬ ಕಾರಣಕ್ಕೆ ಕೋಪಗ್ರಸ್ತರಾದ ಮುಸ್ಲಿಂ ಮೂಲಭೂತವಾದಿಗಳು ಕಾಲೇಜಿನ ಪ್ರೊಫೆಸರ್ ಟಿ.ಜೆ. ಜೋಸೆಫ್ ಅವರ ಕೈ ಕತ್ತರಿಸಿದ ಪ್ರಕರಣಕ್ಕೆ...
ಕೈ ಕಳೆದುಕೊಂಡ ಪ್ರೊ.ಟಿ.ಜೆ. ಜೋಸೆಫ್
ಕೈ ಕಳೆದುಕೊಂಡ ಪ್ರೊ.ಟಿ.ಜೆ. ಜೋಸೆಫ್

ಕೇರಳ: ಪ್ರವಾದಿ ಮೊಹಮ್ಮದ್ ಅವರನ್ನು ಅಪಮಾನಕಾರಿ ರೀತಿಯಲ್ಲಿ ಉಲ್ಲೇಖನ ಮಾಡಿದ್ದರು ಎಂಬ ಕಾರಣಕ್ಕೆ ಕೋಪಗ್ರಸ್ತರಾದ ಮುಸ್ಲಿಂ ಮೂಲಭೂತವಾದಿಗಳು ಕಾಲೇಜಿನ ಪ್ರೊಫೆಸರ್ ಟಿ.ಜೆ. ಜೋಸೆಫ್ ಅವರ ಕೈ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಎರ್ನಾಕುಳಂ ಜಿಲ್ಲೆ ಎನ್ಐಎ ಕೋರ್ಟ್ ಗುರುವಾರ 13 ಮಂದಿ ದೋಷಿತರು ಎಂದು ತೀರ್ಪು ನೀಡಿದೆ.

ಬಿ.ಕಾಂ. ಎರಡನೇ ವರ್ಷದ ಪದವಿ ಪರೀಕ್ಷೆಗೆ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದ ಜೋಸೆಫ್, ದೇವರು ಮತ್ತು ಮೊಹಮ್ಮದ್ ನಡುವಿನ ಕಾಲ್ಪನಿಕ ಮಾತುಕತೆಯ ಭಾಗವೊಂದನ್ನು ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸುವಂತೆ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಕೇಳಲಾಗಿತ್ತು.

ಇಲ್ಲಿ ಉಲ್ಲೇಖಿಸಿದ ಮೊಹಮ್ಮದ್ ಎಂಬುವುದನ್ನು ಪ್ರವಾದಿ ಮೊಹಮ್ಮದ್ ಎಂದೇ ಪರಿಗಣಿಸಿದ ಕೆಲವು ಮುಸ್ಲಿಂ ಮೂಲಭೂತವಾದಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರು 2010ರಲ್ಲಿ ಉಪನ್ಯಾಸಕನ ಮುಂಗೈ ಕತ್ತರಿಸಿದ್ದರು.

ಪ್ರಕರಣ ಸಂಬಂಧ ತನಿಖೆಗೆ ನಡೆಸಿದ ಕೇರಳ ಅಧಿಕಾರಿಗಳು ಸೂಕ್ತ ಸಾಕ್ಷ್ಯಾಧಾರ ನೀಡುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ನ್ಯಾಯಾಲಯವು 18 ಮಂದಿಯನ್ನು ದೋಷಮುಕ್ತಗೊಳಿಸಿದ್ದು, 13 ಮಂದಿಯನ್ನು ದೋಷಿಗಳು ಎಂದು ತೀರ್ಪು ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com