ಮ.ಪ್ರ ಅವಳಿ ರೈಲು ದುರಂತ ಹಿನ್ನೆಲೆ 9 ರೈಲು ಸಂಚಾರ ರದ್ದು

ಮಧ್ಯಪ್ರದೇಶದ ಕುದ್ವಾ ಪ್ರದೇಶದಲ್ಲಿ ನಡೆದ ಅವಳಿ ರೈಲು ದುರಂತ ಹಿನ್ನೆಲೆಯಲ್ಲಿ ಘಟನೆ ಮರುಕಳಿಸದಂತೆ ಎಚ್ಚೆತ್ತುಕೊಂಡಿರುವ ಕೇಂದ್ರ ರೈಲ್ವೆ ಇಲಾಖೆಯು ಇದೀಗ 9 ರೈಲುಗಳ ಸಂಚಾರವನ್ನು ರದ್ದು ಮಾಡಿರುವುದಾಗಿ ತಿಳಿದುಬಂದಿದೆ...
ಮಧ್ಯಪ್ರದೇಶದ ಹರ್ದಾ ಪ್ರದೇಶದಲ್ಲಿ ಹಳಿ ತಪ್ಪಿರುವ ರೈಲುಗಳು
ಮಧ್ಯಪ್ರದೇಶದ ಹರ್ದಾ ಪ್ರದೇಶದಲ್ಲಿ ಹಳಿ ತಪ್ಪಿರುವ ರೈಲುಗಳು
Updated on

ಮುಂಬೈ: ಮಧ್ಯಪ್ರದೇಶದ ಕುದ್ವಾ ಪ್ರದೇಶದಲ್ಲಿ ನಡೆದ ಅವಳಿ ರೈಲು ದುರಂತ ಹಿನ್ನೆಲೆಯಲ್ಲಿ ಘಟನೆ ಮರುಕಳಿಸದಂತೆ ಎಚ್ಚೆತ್ತುಕೊಂಡಿರುವ ಕೇಂದ್ರ ರೈಲ್ವೆ ಇಲಾಖೆಯು ಇದೀಗ 9 ರೈಲುಗಳ ಸಂಚಾರವನ್ನು ರದ್ದು ಮಾಡಿರುವುದಾಗಿ ತಿಳಿದುಬಂದಿದೆ.

ಮುಂಬೈಯಿಂದ ಉತ್ತರ ಪ್ರದೇಶದ ವಾರಣಾಸಿಗೆ ಬರುತ್ತಿದ್ದ ಕಾಮಯಾನಿ ಎಕ್ಸ್ ಪ್ರೆಸ್ ಮಂಗಳವಾರ ಮಧ್ಯರಾತ್ರಿ ಮಧ್ಯಪ್ರದೇಶದ ಪುಟ್ಟ ಸೇತುವೆಯನ್ನು ದಾಟುವಾಗ ಹಳ್ಳಿ ತಪ್ಪಿ ಅಪಘಾತ ಸಂಭವಿಸಿತ್ತು. ಈ ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಪಾಟ್ನಾದಿಂದ ಮುಂಬೈಗೆ ಬರುತ್ತಿದ್ದ ಜನತಾ ಎಕ್ಸ್‌ಪ್ರೆಸ್ (13201) ರೈಲು ಅದೇ ಜಾಗದಲ್ಲಿ ಹಳಿ ತಪ್ಪಿ ಇನ್ನೊಂದು ದುರ್ಘಟನೆ ಸಂಭವಿಸಿತ್ತು. ಈ ಎರಡೂ ಅಪಘಾತಗಳಲ್ಲಿ ಒಟ್ಟು 27ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಘಟನೆ ಸಂಭವಿಸುತ್ತಿದ್ದಂತೆ ರಕ್ಷಣೆ ಮುಂದಾದ ಸಿಬ್ಬಂದಿಗಳು 300 ಕ್ಕೂ ಹೆಚ್ಚುಮಂದಿಯ ರಕ್ಷಣೆ ಮಾಡಿತ್ತು.

ಇದೀಗ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ರೈಲ್ವೆ ಇಲಾಖೆಯು ಮುಂಬೈನಿಂದ ಬರುವ 9 ರೈಲುಗಳನ್ನು ಆಗಸ್ಟ್ 5 ಮತ್ತು 6 ಎರಡು ದಿನಗಳವರೆಗೂ ರದ್ದು ಮಾಡಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com