ರಾಜೀವ್ ಗಾಂಧಿ ಹಂತಕರ ಬಿಡುಗಡೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ

ರಾಜೀವ್ ಹಂತಕರನ್ನು ಬಿಡುಗಡೆ ಮಾಡುವ ತಮಿಳುನಾಡು ಸರ್ಕಾರದ ನಿರ್ಧಾರ ಹಾಗೂ ಶಿಕ್ಷೆ ವಜಾ ಮಾಡುವ ರಾಜ್ಯ ಸರ್ಕಾರಗಳ...
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ರಾಜೀವ್ ಹಂತಕರನ್ನು ಬಿಡುಗಡೆ ಮಾಡುವ ತಮಿಳುನಾಡು ಸರ್ಕಾರದ ನಿರ್ಧಾರ ಹಾಗೂ ಶಿಕ್ಷೆ ವಜಾ ಮಾಡುವ ರಾಜ್ಯ ಸರ್ಕಾರಗಳ ಅಧಿಕಾರ ವ್ಯಾಪ್ತಿ ಕುರಿತ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಕಾರಣರಾದ 7 ಅಪರಾಧಿಗಳು ಬಿಡುಗಡೆ ಮಾಡುವ ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ಕಳೆದ ವರ್ಷ ತಡೆ ನೀಡಿದ್ದ ಅಧೀನ ನ್ಯಾಯಪೀಠ ಎತ್ತಿದ್ದ ಪ್ರಶ್ನೆಗಳ ಬಗ್ಗೆ ಕೂಲಂಕುಷವಾಗಿ ಅಧ್ಯಯನ ಮಾಡಿದ ಬಳಿಕ ಈ ಸಂಬಂಧ ಅಂತಿಮ ತೀರ್ಪು ನೀಡಲು ಮುಖ್ಯ ನ್ಯಾಯಾಮೂರ್ತಿ ಎಚ್.ಎಲ್ ದತ್ತು ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಬುಧವಾರ ನಿರ್ಧರಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com