ಗಡಿಯಲ್ಲಿ ನಾಗರಿಕ ಪ್ರದೇಶಗಳು ಹಾಗೂ ಸೇನಾ ಗಡಿ ಠಾಣೆಗಳ ಮೇಲೆ ಪಾಕ್ ಸೇನೆ ನಡೆಸಿದ ದಾಳಿಗೆ ಶನಿವಾರದಿಂದ ಈವರೆಗೂ ಮಹಿಳೆಯೊಬ್ಬರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದು, ಈ ಸಂಬಂಧ ಬಸಿತ್ ಅವರಿಗೆ ವಿದೇಶಾಂಗ ಸಚಿವಾಲಯವನ್ನು ಸಂಪರ್ಕಿಸುವಂತೆ ಇಲಾಖೆ ಕಾರ್ಯದರ್ಶಿ ಅನಿಲ್ ವಾಧ್ವಾ ಅವರು ಸಮನ್ಸ್ ಜಾರಿಗೊಳಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.