ಪ್ರತಿಭಟನೆ ಕೈಬಿಡಲು ನಿವೃತ್ತ ಸೇನಾನಿಗಳಿಗೆ ಪ್ರಧಾನಿ ಕಾರ್ಯಾಲಯ ಮನವಿ

ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ನಿವೃತ್ತ ಸೇನಾನಿಗಳು ತೀವ್ರಗೊಳಿಸಿದ್ದು ಪ್ರಧಾನಿ ಕಾರ್ಯಾಲಯ ಮಧ್ಯಪ್ರವೆಶಿಸಿದೆ.
ನಿವೃತ್ತ ಸೇನಾನಿಗಳ ಪ್ರತಿಭಟನೆ
ನಿವೃತ್ತ ಸೇನಾನಿಗಳ ಪ್ರತಿಭಟನೆ
Updated on

ನವದೆಹಲಿ: ಒನ್ ರ್ಯಾಂಕ್  ಒನ್ ಪೆನ್ಷನ್( ಜಾರಿಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ನಿವೃತ್ತ ಸೇನಾನಿಗಳು ತೀವ್ರಗೊಳಿಸಿದ್ದು ಪ್ರಧಾನಿ ಕಾರ್ಯಾಲಯ ಮಧ್ಯಪ್ರವೆಶಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ನೃಪೇಂದ್ರ ಮಿಶ್ರಾ ಪ್ರತಿಭಟನಾ ನಿರತ ನಿವೃತ್ತ ಸೇನಾನಿಗಳನ್ನು ಮಾತುಕತೆಗೆ ಆಹ್ವಾನಿಸಿದ್ದು ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದಾರೆ. ಸಮಾನ ಹುದ್ದೆ ಸಮಾನ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಮೂವರು ನಿವೃತ್ತ ಸೇನಾ ಮುಖ್ಯಸ್ಥರು ಆಮರಣಾಂತ ಉಪವಾಸ ಪ್ರಾರಂಭಿಸಿರುವುದರಿಂದ ಪ್ರಧಾನಿ ಕಾರ್ಯಾಲಯ ಮಧ್ಯಪ್ರವೆಶಿಸಿದೆ.
ಒಆರ್ ಒಪಿಯನ್ನು ತಕ್ಷಣವೇ ಜಾರಿಗೊಳಿಸಲು ಒತ್ತಾಯಿಸಿ ಈಗಾಗಲೇ ಮಾಜಿ ಸೇನಾ ಮುಖ್ಯಸ್ಥರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.  ಯೋಜನೆ ಜಾರಿಗೆ ಬದ್ಧವಾಗಿರುವುದಾಗಿ ಹೇಳಿರುವ ಕೇಂದ್ರ ಸರ್ಕಾರ ಕಾಲಮಿತಿಯನ್ನು ನಿಗದಿಪಡಿಸಿಲ್ಲ.   ಒಆರ್ ಒಪಿಯಿಂದ 25 ಲಕ್ಷ ನಿವೃತ್ತ ಸೇನಾನಿಗಳಿಗೆ ಉಪಯೋಗವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com