ಸಹಪಾಠಿಗಳಿಂದಲೇ 9ನೇ ತರಗತಿ ವಿದ್ಯಾರ್ಥಿಯ ಹತ್ಯೆ

ತರಗತಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ದೂರು ನೀಡಿದ ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಆತನ ಸಹಪಾಠಿಗಳೇ ಕಬ್ಬಿಣದ ರಾಡ್‌ನಿಂದ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ತರಗತಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ದೂರು ನೀಡಿದ ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಆತನ ಸಹಪಾಠಿಗಳೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದಿರುವ ಘಟನೆ ದೆಹಲಿಯ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.  ಈ ಪ್ರಕರಣ ಸಂಬಂಧ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

14 ವರ್ಷದ ಶುಭಂ ಕೊಲೆಯಾದ ವಿದ್ಯಾರ್ಥಿ. ಕಳೆದ ಶುಕ್ರವಾರ ಶಾಲೆ ಮುಗಿದ ನಂತರ ಶುಭಂನನ್ನು ಇಬ್ಬರು ಸಹಪಾಠಿಗಳು ಸೈಕಲ್‌ನಲ್ಲಿ ಕರೆದುಕೊಂಡು ಹೋಗಿದ್ದರು. ತಡರಾತ್ರಿಯಾದರೂ ಮಗ ಮನೆಗೆ ಬಾರದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾದ ಪೋಷಕರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.

 ಶಾಲೆಯಿಂದ ಒಂದು ಕಿಲೋ ಮೀಟರ್ ದೂರದಲ್ಲಿರುವ ಕಟ್ಟಡವೊಂದರಲ್ಲಿ ವಿದ್ಯಾರ್ಥಿಯ ಶವ ಪಾಳು ಬಿದ್ದ  ಬಿದ್ದಿತ್ತು. ಈ ಸಂಬಂಧ ಸಹಪಾಠಿಗಳನ್ನು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ.

ಸಹಪಾಠಿಗಳು ಕಬ್ಬಿಣದ ರಾಡ್‌ನಿಂದ ಶುಭಂನ ತಲೆಗೆ ಬಲವಾಗಿ ಹೊಡೆದು ಕೊಂದಿದ್ದಾರೆ. ಘಟನೆಯ ನಂತರ ಆ ಇಬ್ಬರೂ ಹುಡುಗರು ಬಸ್ ಹತ್ತಿ ಹರಿಯಾಣಾಗೆ ತೆರಳಿದ್ದರು. ಅವರಿರುವ ಜಾಗದ ಜಾಡನ್ನು ಹುಡುಕಿ ಹರಿಯಾಣಾದ ಝಾಜ್ಜಿಹಾರ್‌ನಲ್ಲಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com