ಮೈತ್ರಿ ರ್ಯಾಲಿಯಿಂದ ಮುಲಾಯಂ ದೂರ

ಬಿಹಾರ ಚುನಾವಣಾ ಪ್ರಚಾರದ ಭಾಗವಾಗಿ ಜೆಡಿಯು, ಆರ್‍ಜೆಡಿ, ಕಾಂಗ್ರೆಸ್ ಮಹಾಮೈತ್ರಿ ಏರ್ಪಡಿಸಿರುವ ಸ್ವಾಭಿಮಾನ್ ರ್ಯಾಲಿಯಿಂದ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ದೂರ ಉಳಿವ ನಿರ್ಧಾರ ಕೈಗೊಂಡಿದ್ದಾರೆ...
ಮುಲಾಯಂ ಸಿಂಗ್ ಯಾದವ್ (ಸಂಗ್ರಹ ಚಿತ್ರ)
ಮುಲಾಯಂ ಸಿಂಗ್ ಯಾದವ್ (ಸಂಗ್ರಹ ಚಿತ್ರ)

ಲಖನೌ: ಬಿಹಾರ ಚುನಾವಣಾ ಪ್ರಚಾರದ ಭಾಗವಾಗಿ ಜೆಡಿಯು, ಆರ್‍ಜೆಡಿ, ಕಾಂಗ್ರೆಸ್ ಮಹಾಮೈತ್ರಿ ಏರ್ಪಡಿಸಿರುವ ಸ್ವಾಭಿಮಾನ್ ರ್ಯಾಲಿಯಿಂದ ಸಮಾಜವಾದಿ ಪಕ್ಷದ ನಾಯಕ ಮುಲಾಯಂ  ಸಿಂಗ್ ದೂರ ಉಳಿವ ನಿರ್ಧಾರ ಕೈಗೊಂಡಿದ್ದಾರೆ.

ಭಾನುವಾರದ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಭಾಗವಹಿಸುವುದು ಬಹುತೇಕ ಖಚಿತವಾಗಿದ್ದು, ಅವರೊಂದಿಗೆ ವೇದಿಕೆ ಹಂಚಿಕೊಳ್ಳಲು ಸಿದ್ಧವಿರದ ಮುಲಾಯಂ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಮೂಲಗಳು ಹೇಳಿವೆ. ಆದರೆ, ಮಹತ್ವದ ಬೆಳವಣಿಗೆ ಯೊಂದರಲ್ಲಿ ಕಳೆದ ಗುರುವಾರ ದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ಬಳಿಕ ಮುಲಾಯಂ,  ಮಹಾಮೈತ್ರಿಯ ಚಟುವಟಿಕೆಗಳಿಂದ ದೂರ ಉಳಿಯುವ ಮೂಲಕ ಬಿಜೆಪಿಗೆ ಅನುಕೂಲಕರ ವಾತಾವರಣ ನಿರ್ಮಿಸುತ್ತಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com