ನವದೆಹಲಿ: ಅರವಿಂದ್ ಕೇಜ್ರಿವಾಲ್ ಸರ್ಕಾರದಲ್ಲಿ ಸಣ್ಣ ಬದಲಾವಣೆಯಾಗಿದ್ದು, ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಹೆಚ್ಚುವರಿಯಾಗಿ ಕಾನೂನು ಸಚಿವಾಲಯದ ಹೊಣೆ ನೀಡಲಾಗಿದೆ.
ನಕಲಿ ಪದವಿ ಪ್ರಕರಣ ಸಂಬಂಧ ಕಳೆದ ಜೂನ್ನಲ್ಲಿ ಜಿತೇಂದ್ರ ತೋಮರ್ ಅವರನ್ನು ಬಂಧಿಸಿದ ಬಳಿಕ ಕಾನೂನು ಖಾತೆಯನ್ನು ಕಪಿಲ್ ಮಿಶ್ರ ಅವರಿಗೆ ವಹಿಸಲಾಗಿತ್ತು. ಆದರೆ ಇದೀಗ ಸಿಸೋಡಿಯಾ ಅವರಿಗೆ ವಹಿಸಲಾಗಿದೆ.
ಮಿಶ್ರಾ ಅವರು ಜಲ ಮತ್ತು ಪ್ರವಾಸೋದ್ಯಮ ಸಚಿವರಾಗಿ ಹಾಗೂ ದೆಹಲಿ ಜಲ ಮಂಡಳಿ ಉಪಾಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.
Advertisement