ಚೆನ್ನೈ: ಜಲಪ್ರಳಯಕ್ಕೆ ತುತ್ತಾಗಿದ್ದ ಚೆನ್ನೈನಲ್ಲಿ ಈಗ ಪರಿಸ್ಥಿತಿ ಸಹಜ ಸ್ಥಿತಿಗೆ ಬರತೊಡಗಿದೆ. ಅಲ್ಲಿ ಈಗ ಮಳೆಯೂ ಕಡಿಮೆಯಾಗಿದೆ. ಆದರೆ ಅಲ್ಲಿನ ಜನರು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಮಳೆಯಿಂದಾಗಿ ತಮ್ಮ ಮನೆ, ಬಂಧುಗಳನ್ನು ಕಳೆದುಕೊಂಡ ಕುಟುಂಬಗಳು ಈಗ ಮಾನಸಿಕ ಸಾಂತ್ವನವನ್ನು ಬಯಸಿ ಮನಶಾಸ್ತ್ರಜ್ಞರನ್ನು ಭೇಟಿ ಮಾಡತೊಡಗಿವೆ.