ಪಂಜಾಬ್ ಸಿಎಂ ಅಭ್ಯರ್ಥಿಯಾಗಿ ಕೇಜ್ರಿವಾಲ್: ಮನೀಶ್ ಸಿಸೋಡಿಯಾಗೆ ದೆಹಲಿ ಪಾರುಪತ್ಯ?

ಮುಂಬರುವ ಪಂಜಾಬ್ ವಿಧಾನ ಸಭೆ ಚುನಾವಣೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಎಪಿಯಿಂದ ಸಿಎಂ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ...
ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ
ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ
Updated on

ನವದೆಹಲಿ: ಮುಂಬರುವ ಪಂಜಾಬ್ ವಿಧಾನ ಸಭೆ ಚುನಾವಣೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಎಪಿಯಿಂದ ಸಿಎಂ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಒಂದು ವೇಳೆ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಬಹುಮತ ಪಡೆದರೇ ಅರವಿಂದ ಕೇಜ್ರಿವಾಲ್ ಸಿಎಂ ಆಗಲಿದ್ದಾರೆ. ದೆಹಲಿಗೆ ಮನೀಶ್ ಸಿಸೋಡಿಯಾ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

ಅರವಿಂದ್ ಕೇಜ್ರಿವಾಲ್ ಬಗ್ಗೆ ಮಾಧ್ಯಮಗಳು ಊಹಾಪೋಹದ ಸುದ್ದಿ ಪ್ರಕಟಿಸುತ್ತಿವೆ. ಇದೊಂದು ಸುಳ್ಳು ಸುದ್ದಿ ಎಂದು ಎಎಪಿ ವಕ್ತಾರ ಅಶುತೋಶ್ ಆರೋಪಿಸಿದ್ದಾರೆ.

2017 ರಲ್ಲಿ ಪಂಜಾಬ್ ವಿಧಾನ ಸಭೆಗೆ ಚುನಾವಣೆ ನಡೆಯಲಿದೆ. ದೆಹಲಿ ಚುನಾವಣಾ ಫಲಿತಾಂಶದಂತೆ  ಪಂಜಾಬ್ ವಿಧಾನ ಸಭೆ ಫಲಿತಾಂಶವೂ ಬರಲಿದೆ. ಜನಾದೇಶ ನಮ್ಮ ಪರವಾಗಿಯೇ ಇದೆ ಎಂದು ಈ ಹಿಂದೆ ಅರವಿಂದ್ ಕೇಜ್ರಿವಾಲ್ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com