ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ದೆಹಲಿ ಸರ್ಕಾರದ ಸಮ-ಬೆಸ ಯೋಜನೆಗೆ ಎನ್ ಜಿಟಿ ಟೀಕೆ

ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ಸಮಸ್ಯೆ ತಡೆಗಟ್ಟಲು ದೆಹಲಿ ಸರ್ಕಾರ ಜಾರಿಗೊಳಿಸಲು ನಿರ್ಧರಿಸಿದ್ದ ಸಮ-ಬೆಸ ಸಂಖ್ಯೆ ವಾಹನ ಸಂಚಾರ ಸೂತ್ರಕ್ಕೆ ....
Published on

ನವದೆಹಲಿ: ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ಸಮಸ್ಯೆ ತಡೆಗಟ್ಟಲು ದೆಹಲಿ ಸರ್ಕಾರ ಜಾರಿಗೊಳಿಸಲು ನಿರ್ಧರಿಸಿದ್ದ ಸಮ-ಬೆಸ ಸಂಖ್ಯೆ ವಾಹನ ಸಂಚಾರ ಸೂತ್ರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದೆ.

ಸರ್ಕಾರದ ಈ ನೀತಿಯಿಂದಾಗಿ ಜನರು ಎರಡೆರಡು ಕಾರುಗಳನ್ನು ಖರೀದಿಸುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ವಾಯು ಮಾಲಿನ್ಯ ಸಮಸ್ಯೆ ನಿವಾರಣೆಯಾಗುವ ಬದಲು ಹೆಚ್ಚಾಗುವ ಸಾಧ್ಯತೆಯೇ ಜಾಸ್ತಿ ಇದೆ ಎಂದು ಎನ್ ಜಿಟಿ ಕಳವಳ ವ್ಯಕ್ತಪಡಿಸಿದೆ.

ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಬಳಕೆಗಾಗಿ ಹೊಸದಾಗಿ ಡಿಸೆಲ್ ವಾಹನಗಳನ್ನು ಖರೀದಿಸಬಾರದೆಂದು ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಎನ್ ಜಿ ಟಿ ಸೂಚನೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com