ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರು ದೇಶದಲ್ಲಿ ನಡೆಸಿದ ಭಯೋತ್ಪಾದನಾ ಕೃತ್ಯಗಳಿಗೆ ಅಂತ್ಯಕರ್ಮ ಮಾಡುವ ಸಂಕೇತವಾಗಿ ಈ ಕಾರನ್ನು ಸುಡಲಾಗುತ್ತಿದೆ. ಈ ಹಿಂದೆ ಆ ಕಾರನ್ನು ಆ್ಯಂಬುಲೆನ್ಸ್ ಮಾಡುವ ಬಗ್ಗೆ ಯೋಚಿಸಲಾಗಿತ್ತು. ಆದಾಗ್ಯೂ, ಈ ಕಾರು ಖರೀದಿಸಿದರೆ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಡಿ ಕಂಪನಿ ಬೆದರಿಕೆಯನಿನು ಒಡ್ಡಿತ್ತು. ಇದೀಗ ಅವರಿಗೆ ತಕ್ಕ ಉತ್ತರ ನೀಡುವುದಕ್ಕಾಗಿಯೇ ಕಾರನ್ನು ಭಸ್ಮಗೊಳಿಸಲಾಗುತ್ತದೆ ಎಂದು ಚಕ್ರಪಾಣಿ ಹೇಳಿದ್ದಾರೆ.