'ಎಎಪಿ ನಾಯಕರು ತಮ್ಮ ಹುದ್ದೆಗೆ ತಕ್ಕಂತೆ ನಡೆದುಕೊಳ್ಳಬೇಕು. ಸಾಮಾನ್ಯ ಜನರಂತೆ ನಡೆದುಕೊಳ್ಳಬಾರದು. ಅಸಭ್ಯವಾಗಿ ವರ್ತಿಸುವ ಹಕ್ಕು ಅವರಿಗಿಲ್ಲ. ರಾಜಕೀಯದಲ್ಲಿ ಕೀಳುಮಟ್ಟದ ಭಾಷೆ ಬಳಸಬಾರದು ಎಂದಿರುವ ಜೇಟ್ಲಿ, ಅಸಭ್ಯವಾಗಿ ಸುಳ್ಳು ಹೇಳುವುದರಿಂದ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ' ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಅಸಭ್ಯತೆ ಭಾರತೀಯ ರಾಜಕೀಯದ ಹೊಸ ರೂಪವೇ? ಎಂದು ಪ್ರಶ್ನಿಸಿದ್ದಾರೆ.