ಕಾಂಗ್ರೆಸ್ ದರ್ಶನ್ ಲೇಖನದ ಬಗ್ಗೆ ಪ್ರತಿಕ್ರಿಯಿಸಿದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ, ಪತ್ರಿಕೆಗೆ ಇಂಥಾ ಹಳೆಯ ವಿಷಯಗಳನ್ನು ಕೆದಕುವ ಅಗತ್ಯವಿರಲಿಲ್ಲ. ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಹತ್ಯೆಯ ನಂತರ ಸೋನಿಯಾ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ. ಅವರ ನೇತೃತ್ವದಲ್ಲಿಯೇ ಮನಮೋಹನ್ ಸಿಂಗ್ ಸರ್ಕಾರ 10 ವರ್ಷಗಳ ಕಾಲ ಆಳ್ವಿಕೆ ನಡೆಸುವಂತಾಯಿತು ಎಂದಿದೆ.